ಯಮುನಾ ನದಿಯಲ್ಲಿ ನೀರು ಕಲುಷಿತಗೊಂಡಿದ್ದು, ವಿಷಪೂರಿತ ನೊರೆ ತೇಲುತ್ತಿದೆ. ಜನರು ನದಿಗೆ ಇಳಿಯುವುದನ್ನು ದೆಹಲಿ ಸರ್ಕಾರ ನಿಷೇಧಿಸಿತ್ತು. ಆದರೆ, ನೊರೆಯ ಪ್ರಮಾಣ ಕಡಿಮೆ ಮಾಡಲು ಟ್ಯಾಂಕರ್ಗಳ ಮೂಲಕ ನದಿಗೆ ನೀರು ಸಿಂಪಡಿಸಲಾಗುತ್ತಿದೆ. ಸರ್ಕಾರದ ಈ ಕ್ರಮಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ.