<p><strong>ದಾಂತೇವಾಡ:</strong> ‘ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ಮೂವರು ನಕ್ಸಲರು ಶರಣಾಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.</p>.<p>‘ಈ ಮೂವರು 2015ರಿಂದ ದಾಂತೇವಾಡ ಮತ್ತು ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟ, ರಸ್ತೆ, ಸೇತುವೆಗಳಿಗೆ ಹಾನಿ ಮತ್ತು ನಕ್ಸಲರ ಕುರಿತಾಗಿ ಪೋಸ್ಟರ್ಗಳನ್ನು ಹಾಕುವ ಕಾರ್ಯಗಳಲ್ಲಿ ತೊಡಗಿದ್ದರು’ ಎಂದು ಅವರು ಹೇಳಿದರು.</p>.<p>‘ತಾವು ಮಾವೋವಾದಿಗಳ ತತ್ವಗಳಿಂದ ಬೇಸರಗೊಂಡು ಶರಣಾಗಿದ್ದೇವೆ. ಅಲ್ಲದೆ ‘ಲೋನ್ ವರೋತ್ತು’ (ಮರಳಿ ಮನೆಗೆ) ಅಭಿಯಾನವು ನಮ್ಮನ್ನು ಹಿಂಸೆಯನ್ನು ತೊರೆಯುವಂತೆ ಪ್ರೇರಿಪಿಸಿತು’ ಎಂದು ನಕ್ಸಲರು ಹೇಳಿರುವುದಾಗಿ ದಾಂತೇವಾಡದ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಅವರು ಮಾಹಿತಿ ನೀಡಿದರು.</p>.<p>‘ಅಯತಾ ಕೊರ್ಹಮಿ, ಉಯಿಕಾ ಸೋಮದು ಮತ್ತು ಕಾರ್ತಮ್ ಮಹೇಂದ್ರ ಪೊಲೀಸರಿಗೆ ಶರಣಾಗಿದ್ದಾರೆ.ಇದರಲ್ಲಿ ಅಯತಾ ಕೊರ್ಹಮಿ ಪತ್ತೆಗಾಗಿ ಸರ್ಕಾರವು ₹1 ಲಕ್ಷ ನಗದು ಪುರಸ್ಕಾರ ಘೋಷಿಸಿತ್ತು. ಈತ 2018ರಲ್ಲಿ ನಡೆದಿದ್ದ ಕೊಲೆಯೊಂದರ ಪ್ರಕರಣದ ಆರೋಪಿಯೂ ಆಗಿದ್ದಾನೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾಂತೇವಾಡ:</strong> ‘ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ಮೂವರು ನಕ್ಸಲರು ಶರಣಾಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.</p>.<p>‘ಈ ಮೂವರು 2015ರಿಂದ ದಾಂತೇವಾಡ ಮತ್ತು ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟ, ರಸ್ತೆ, ಸೇತುವೆಗಳಿಗೆ ಹಾನಿ ಮತ್ತು ನಕ್ಸಲರ ಕುರಿತಾಗಿ ಪೋಸ್ಟರ್ಗಳನ್ನು ಹಾಕುವ ಕಾರ್ಯಗಳಲ್ಲಿ ತೊಡಗಿದ್ದರು’ ಎಂದು ಅವರು ಹೇಳಿದರು.</p>.<p>‘ತಾವು ಮಾವೋವಾದಿಗಳ ತತ್ವಗಳಿಂದ ಬೇಸರಗೊಂಡು ಶರಣಾಗಿದ್ದೇವೆ. ಅಲ್ಲದೆ ‘ಲೋನ್ ವರೋತ್ತು’ (ಮರಳಿ ಮನೆಗೆ) ಅಭಿಯಾನವು ನಮ್ಮನ್ನು ಹಿಂಸೆಯನ್ನು ತೊರೆಯುವಂತೆ ಪ್ರೇರಿಪಿಸಿತು’ ಎಂದು ನಕ್ಸಲರು ಹೇಳಿರುವುದಾಗಿ ದಾಂತೇವಾಡದ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಅವರು ಮಾಹಿತಿ ನೀಡಿದರು.</p>.<p>‘ಅಯತಾ ಕೊರ್ಹಮಿ, ಉಯಿಕಾ ಸೋಮದು ಮತ್ತು ಕಾರ್ತಮ್ ಮಹೇಂದ್ರ ಪೊಲೀಸರಿಗೆ ಶರಣಾಗಿದ್ದಾರೆ.ಇದರಲ್ಲಿ ಅಯತಾ ಕೊರ್ಹಮಿ ಪತ್ತೆಗಾಗಿ ಸರ್ಕಾರವು ₹1 ಲಕ್ಷ ನಗದು ಪುರಸ್ಕಾರ ಘೋಷಿಸಿತ್ತು. ಈತ 2018ರಲ್ಲಿ ನಡೆದಿದ್ದ ಕೊಲೆಯೊಂದರ ಪ್ರಕರಣದ ಆರೋಪಿಯೂ ಆಗಿದ್ದಾನೆ’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>