ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಛತ್ತೀಸಗಡ: ಮೂವರು ನಕ್ಸಲರು ಪೊಲೀಸರಿಗೆ ಶರಣು

Last Updated 22 ಜೂನ್ 2021, 8:26 IST
ಅಕ್ಷರ ಗಾತ್ರ

ದಾಂತೇವಾಡ: ‘ಛತ್ತೀಸಗಡದ ದಾಂತೇವಾಡ ಜಿಲ್ಲೆಯಲ್ಲಿ ಮೂವರು ನಕ್ಸಲರು ಶರಣಾಗಿದ್ದಾರೆ’ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದರು.

‘ಈ ಮೂವರು 2015ರಿಂದ ದಾಂತೇವಾಡ ಮತ್ತು ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟ, ರಸ್ತೆ, ಸೇತುವೆಗಳಿಗೆ ಹಾನಿ ಮತ್ತು ನಕ್ಸಲರ ಕುರಿತಾಗಿ ಪೋಸ್ಟರ್‌ಗಳನ್ನು ಹಾಕುವ ಕಾರ್ಯಗಳಲ್ಲಿ ತೊಡಗಿದ್ದರು’ ಎಂದು ಅವರು ಹೇಳಿದರು.

‘ತಾವು ಮಾವೋವಾದಿಗಳ ತತ್ವಗಳಿಂದ ಬೇಸರಗೊಂಡು ಶರಣಾಗಿದ್ದೇವೆ. ಅಲ್ಲದೆ ‘ಲೋನ್‌ ವರೋತ್ತು’ (ಮರಳಿ ಮನೆಗೆ) ಅಭಿಯಾನವು ನಮ್ಮನ್ನು ಹಿಂಸೆಯನ್ನು ತೊರೆಯುವಂತೆ ಪ್ರೇರಿಪಿಸಿತು’ ಎಂದು ನಕ್ಸಲರು ಹೇಳಿರುವುದಾಗಿ ದಾಂತೇವಾಡದ ಪೊಲೀಸ್‌ ವರಿಷ್ಠಾಧಿಕಾರಿ ಅಭಿಷೇಕ್‌ ಪಲ್ಲವ ಅವರು ಮಾಹಿತಿ ನೀಡಿದರು.

‘ಅಯತಾ ಕೊರ್ಹಮಿ, ಉಯಿಕಾ ಸೋಮದು ಮತ್ತು ಕಾರ್ತಮ್ ಮಹೇಂದ್ರ ಪೊಲೀಸರಿಗೆ ಶರಣಾಗಿದ್ದಾರೆ.ಇದರಲ್ಲಿ ಅಯತಾ ಕೊರ್ಹಮಿ ಪತ್ತೆಗಾಗಿ ಸರ್ಕಾರವು ₹1 ಲಕ್ಷ ನಗದು ಪುರಸ್ಕಾರ ಘೋಷಿಸಿತ್ತು. ಈತ 2018ರಲ್ಲಿ ನಡೆದಿದ್ದ ಕೊಲೆಯೊಂದರ ಪ್ರಕರಣದ ಆರೋಪಿಯೂ ಆಗಿದ್ದಾನೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT