ದೆಹಲಿಯಿಂದ ಜಗದಾಲ್ಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೃಹ ಸಚಿವರು, ಇಲ್ಲಿನ ಪೊಲೀಸ್ ಲೇನ್ಗೆ ಭೇಟಿ ನೀಡಿ, ಹುತಾತ್ಮರಾದ 14 ಭದ್ರತಾ ಸಿಬ್ಬಂದಿಯ ಪಾರ್ಥಿವ ಶರೀರಗಳಿಗೆ ಪುಷ್ಪಗುಚ್ಛದೊಂದಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಛತ್ತೀಸ್ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಇತರೆ ಉನ್ನತ ಮಟ್ಟದ ಅಧಿಕಾರಿಗಳು ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಿದರು.