ರಾಯ್ಪುರ: ಛತ್ತೀಸ್ಗಡದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಮಾವೋವಾದಿ ನಕ್ಸಲರೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಯ ಐವರು ಸಿಬ್ಬಂದಿ ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಎನ್ಕೌಂಟರ್ನಲ್ಲಿ ಕೆಲವು ನಕ್ಸಲರೂ ಸಾವಿಗೀಡಾಗಿರಬಹುದು’ ಎಂದು ಪೊಲೀಸರು ಶಂಕಿಸಿದ್ದಾರೆ.
‘ತಾರೆಮ್ ಪ್ರದೇಶದಲ್ಲಿ (ಸುಕ್ಮಾ ಮತ್ತು ಬಿಜಾಪುರ ಗಡಿ) ನಕ್ಸಲ್ ವಿರೋಧಿ ಕಾರ್ಯಾಚರಣೆಗಾಗಿ ಭದ್ರತಾ ಪಡೆಗಳು ತೆರಳಿದ್ದ ಸಂದರ್ಭದಲ್ಲಿ ನಕ್ಸಲರು ಮತ್ತು ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು’ ಎಂದು ಛತ್ತೀಸ್ಗಡದ ಪೊಲೀಸ್ ಮಹಾ ನಿರ್ದೇಶಕ ಡಿ.ಎಂ. ಅವಸ್ಥಿ ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.