ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯಮಿ ನವೀನ್‌ ಜಿಂದಾಲ್‌ಗೆ ಕೈದಿಯಿಂದ ಬೆದರಿಕೆ ಪತ್ರ: ₹50 ಕೋಟಿಗೆ ಬೇಡಿಕೆ

Last Updated 24 ಜನವರಿ 2023, 13:59 IST
ಅಕ್ಷರ ಗಾತ್ರ

ರಾಯಗಢ: ಛತ್ತೀಸಗಢದ ಬಿಲಾಸ್‌ಪುರ ಜಿಲ್ಲೆಯ ಜೈಲೊಂದರ ಕೈದಿಯೊಬ್ಬ ಉದ್ಯಮಿ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ನವೀನ್‌ ಜಿಂದಾಲ್‌ ಅವರಿಗೆ ಬೆದರಿಕೆ ಪತ್ರ ಕಳುಹಿಸಿದ್ದು, ₹50 ಕೋಟಿಗೆ ಬೇಡಿಕೆ ಇಟ್ಟಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ರಾಯಗಢದ ಪತ್ರಪಾಲಿ ಗ್ರಾಮದಲ್ಲಿರುವ ಜಿಂದಾಲ್‌ ಸ್ಟೀಲ್‌ ಆ್ಯಂಡ್‌ ಪವರ್ ಲಿಮಿಟೆಡ್‌ನ (ಜೆಎಸ್‌ಪಿಎಲ್) ಕಾರ್ಖಾನೆಗೆ ಕಳೆದ ವಾರ ಅಂಚೆಯ ಮೂಲಕ ಈ ಪತ್ರ ತಲುಪಿದೆ ಎಂದು ಹೇಳಿದ್ದಾರೆ.

ಹಣ ನೀಡದಿದ್ದರೆ ಪರಿಣಾಮ ಎದುರಿಸಬೇಕಾದೀತು ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾನೆ ಎಂದೂ ವಿವರಿಸಿದ್ದಾರೆ.

ಈ ಸಂಬಂಧ ಕೈದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT