<p><strong>ರಾಯಪುರ:</strong> ‘ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ನಕ್ಸಲನೊಬ್ಬ ಹತನಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>‘ದಾಂತೇವಾಡದ ನೀಲವಾಯದ ಅರಣ್ಯದಲ್ಲಿ ಬೆಳಿಗ್ಗೆ 6 ಗಂಟೆಗೆ ನಕ್ಸಲರು ಮತ್ತು ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಹಾಗೂ ರಾಜ್ಯ ಪೊಲೀಸ್ ಇಲಾಖೆಯ ನಕ್ಸಲ್ ನಿಗ್ರಹ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಕ್ಸಲ್ನೊಬ್ಬ ಮೃತಪಟ್ಟಿದ್ದಾನೆ.’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಮಾಹಿತಿ ನೀಡಿದರು.</p>.<p>‘ಈತನನ್ನು ಮಲ್ಲಾಪಾರ ನಿವಾಸಿ ಕೋಸಾ ಎಂದು ಗುರುತಿಸಲಾಗಿದ್ದು, ಈತನ ತಲೆಗೆ ಸರ್ಕಾರವು ₹5 ಲಕ್ಷ ಬಹುಮಾನ ಘೋಷಿಸಿತ್ತು. ಕೋಸಾ ಕಳೆದ 15 ವರ್ಷಗಳಿಂದ ಮಾವೋವಾದಿ ಸಂಘಟನೆಯೊಂದಿಗೆ ಸಕ್ರಿಯನಾಗಿದ್ದ, ಈತ ಮಲಾಗಿರಿ ಸಮಿತಿಯ ಸದಸ್ಯ’ ಎಂದು ಅವರು ಹೇಳಿದರು.</p>.<p>ಕೋಸಾ ವಿರುದ್ಧ 15 ಪ್ರಕರಣಗಳಿವೆ. ಎನ್ಕೌಂಟರ್ ನಡೆದ ಸ್ಥಳದಿಂದ ಎ9 ಎಂಎಂ ಪಿಸ್ತೂಲ್, ನಾಡ ಬಂದೂಕು, 3 ಕೆ.ಜಿ.ಸುಧಾರಿತ ಸ್ಫೋಟಕ ಸಾಧನ, ದಿನಬಳಕೆಯ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಪುರ:</strong> ‘ಛತ್ತೀಸಗಢದ ದಾಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ನಕ್ಸಲನೊಬ್ಬ ಹತನಾಗಿದ್ದಾನೆ’ ಎಂದು ಪೊಲೀಸರು ತಿಳಿಸಿದರು.</p>.<p>‘ದಾಂತೇವಾಡದ ನೀಲವಾಯದ ಅರಣ್ಯದಲ್ಲಿ ಬೆಳಿಗ್ಗೆ 6 ಗಂಟೆಗೆ ನಕ್ಸಲರು ಮತ್ತು ಜಿಲ್ಲಾ ಮೀಸಲು ಪಡೆ (ಡಿಆರ್ಜಿ) ಹಾಗೂ ರಾಜ್ಯ ಪೊಲೀಸ್ ಇಲಾಖೆಯ ನಕ್ಸಲ್ ನಿಗ್ರಹ ಪಡೆ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ವೇಳೆ ನಕ್ಸಲ್ನೊಬ್ಬ ಮೃತಪಟ್ಟಿದ್ದಾನೆ.’ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ಮಾಹಿತಿ ನೀಡಿದರು.</p>.<p>‘ಈತನನ್ನು ಮಲ್ಲಾಪಾರ ನಿವಾಸಿ ಕೋಸಾ ಎಂದು ಗುರುತಿಸಲಾಗಿದ್ದು, ಈತನ ತಲೆಗೆ ಸರ್ಕಾರವು ₹5 ಲಕ್ಷ ಬಹುಮಾನ ಘೋಷಿಸಿತ್ತು. ಕೋಸಾ ಕಳೆದ 15 ವರ್ಷಗಳಿಂದ ಮಾವೋವಾದಿ ಸಂಘಟನೆಯೊಂದಿಗೆ ಸಕ್ರಿಯನಾಗಿದ್ದ, ಈತ ಮಲಾಗಿರಿ ಸಮಿತಿಯ ಸದಸ್ಯ’ ಎಂದು ಅವರು ಹೇಳಿದರು.</p>.<p>ಕೋಸಾ ವಿರುದ್ಧ 15 ಪ್ರಕರಣಗಳಿವೆ. ಎನ್ಕೌಂಟರ್ ನಡೆದ ಸ್ಥಳದಿಂದ ಎ9 ಎಂಎಂ ಪಿಸ್ತೂಲ್, ನಾಡ ಬಂದೂಕು, 3 ಕೆ.ಜಿ.ಸುಧಾರಿತ ಸ್ಫೋಟಕ ಸಾಧನ, ದಿನಬಳಕೆಯ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>