<p class="title"><strong>ರಾಯ್ಪುರ: </strong>ಛತ್ತೀಸ್ಗಡದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲನೊಬ್ಬ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆಂದು ಹೊರಟಿದ್ದಾಗ ಕಾಟೆಕಲ್ಯಾಣ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಗಾಡಂ ಮತ್ತು ಜುಂಗಂಪಾಲ್ ಗ್ರಾಮಗಳ ಮಧ್ಯದ ಅರಣ್ಯದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ದಾಂತೇವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.</p>.<p class="title">‘ಗುಂಡಿನ ಚಕಮಕಿ ಮುಗಿದ ನಂತರ ನಕ್ಸಲ್ ವೆಟ್ಟಿ ಹಂಗಾ ಎಂಬಾತನಮೃತದೇಹ ಪತ್ತೆಯಾಯಿತು. ಸ್ಥಳದಲ್ಲಿ 8 ಎಂ.ಎಂ. ಪಿಸ್ತೂಲ್, ನಾಡಬಂದೂಕು, 2ಕೆ.ಜಿ. ಸುಧಾರಿತ ಸ್ಫೋಟಕ ಸಾಮಗ್ರಿ (ಐಇಡಿ), ಮಾವೋವಾದಿ ಬ್ಯಾಗ್, ಸಾಹಿತ್ಯ ಹಾಗೂ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದರು ಅವರು ಮಾಹಿತಿ ನೀಡಿದ್ದಾರೆ.</p>.<p class="title">‘ಹಂಗಾ, ನಿಷೇಧಿತ ಮಾವೋವಾದಿಯ ಚಳವಳಿಯ ‘ಮಿಲಿಟಿಯಾ ಕಮಾಂಡರ್’ ಆಗಿದ್ದ. ಈತನ ತಲೆಗೆ ಸರ್ಕಾರ ₹ 1ಲಕ್ಷ ಬಹುಮಾನ ಘೋಷಿಸಿತ್ತು’ ಎಂದೂ ಪಲ್ಲವ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ರಾಯ್ಪುರ: </strong>ಛತ್ತೀಸ್ಗಡದ ದಾಂತೇವಾಡ ಜಿಲ್ಲೆಯಲ್ಲಿ ಭಾನುವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲನೊಬ್ಬ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p class="title">ಜಿಲ್ಲಾ ರಿಸರ್ವ್ ಗಾರ್ಡ್ (ಡಿಆರ್ಜಿ) ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆಂದು ಹೊರಟಿದ್ದಾಗ ಕಾಟೆಕಲ್ಯಾಣ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಗಾಡಂ ಮತ್ತು ಜುಂಗಂಪಾಲ್ ಗ್ರಾಮಗಳ ಮಧ್ಯದ ಅರಣ್ಯದಲ್ಲಿ ಮಧ್ಯಾಹ್ನ 2 ಗಂಟೆ ಸುಮಾರಿಗೆ ಗುಂಡಿನ ಚಕಮಕಿ ನಡೆದಿದೆ ಎಂದು ದಾಂತೇವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಪಲ್ಲವ ತಿಳಿಸಿದ್ದಾರೆ.</p>.<p class="title">‘ಗುಂಡಿನ ಚಕಮಕಿ ಮುಗಿದ ನಂತರ ನಕ್ಸಲ್ ವೆಟ್ಟಿ ಹಂಗಾ ಎಂಬಾತನಮೃತದೇಹ ಪತ್ತೆಯಾಯಿತು. ಸ್ಥಳದಲ್ಲಿ 8 ಎಂ.ಎಂ. ಪಿಸ್ತೂಲ್, ನಾಡಬಂದೂಕು, 2ಕೆ.ಜಿ. ಸುಧಾರಿತ ಸ್ಫೋಟಕ ಸಾಮಗ್ರಿ (ಐಇಡಿ), ಮಾವೋವಾದಿ ಬ್ಯಾಗ್, ಸಾಹಿತ್ಯ ಹಾಗೂ ಔಷಧಿಗಳನ್ನು ವಶಪಡಿಸಿಕೊಳ್ಳಲಾಗಿದೆ’ ಎಂದರು ಅವರು ಮಾಹಿತಿ ನೀಡಿದ್ದಾರೆ.</p>.<p class="title">‘ಹಂಗಾ, ನಿಷೇಧಿತ ಮಾವೋವಾದಿಯ ಚಳವಳಿಯ ‘ಮಿಲಿಟಿಯಾ ಕಮಾಂಡರ್’ ಆಗಿದ್ದ. ಈತನ ತಲೆಗೆ ಸರ್ಕಾರ ₹ 1ಲಕ್ಷ ಬಹುಮಾನ ಘೋಷಿಸಿತ್ತು’ ಎಂದೂ ಪಲ್ಲವ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>