ಪ್ರಕರಣವೇನು?: 19 ವರ್ಷದ ಯುವತಿಯ ಮೇಲೆ ಮೂವರು ಅತ್ಯಾಚಾರ ಎಸಗಿ, ಆಕೆಯನ್ನು ಕೊಲೆ ಮಾಡಿದ್ದರು. ಸ್ಕ್ರೂಡ್ರೈವರ್ ಹಾಗೂ ಇತರ ಕಾರಿನ ಟೂಲ್ಸ್ಗಳನ್ನು ಬಳಸಿ ಆಕೆಯ ದೇಹವನ್ನು ಕೊಚ್ಚಿದ್ದರು. ವಿಚಾರಣಾ ನ್ಯಾಯಾಲಯವು ಮೂವರಿಗೆ 2014ರಲ್ಲಿ ಮರಣದಂಡನೆ ಶಿಕ್ಷೆ ವಿಧಿಸಿತ್ತು. ದೆಹಲಿ ಹೈಕೋರ್ಟ್ ಕೂಡ ಈ ತೀರ್ಪನ್ನು ಎತ್ತಿಹಿಡಿದಿತ್ತು. ಆದರೆ, ಕಳೆದ ನವೆಂಬರ್ನಲ್ಲಿ ಸುಪ್ರೀಂ ಕೋರ್ಟ್ ಮೂವರನ್ನು ಪ್ರಕರಣದಿಂದ ಖುಲಾಸೆಗೊಳಿಸಿತ್ತು.