<p><strong>ನವದೆಹಲಿ</strong>: ‘ಹಲವು ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡುವಲ್ಲಿ ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ದೂರಿದ್ದಾರೆ.</p>.<p>ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಹೈಕೋರ್ಟ್ಗಳಿಗೆ ಮಂಜೂರಾಗಿರುವ 1,080 ನ್ಯಾಯಮೂರ್ತಿ ಹುದ್ದೆಗಳ ಪೈಕಿ 416 ಖಾಲಿಯಿವೆ. ಡಿಆರ್ಟಿ, ಎನ್ಸಿಎಲ್ಎಟಿ, ಟಿಡಿಎಸ್ಎಟಿ ಸೇರಿದಂತೆ ಹಲವು ನ್ಯಾಯಮಂಡಳಿಗಳಲ್ಲಿ ಅಧ್ಯಕ್ಷರ ಸ್ಥಾನಗಳೂ ಖಾಲಿಯಿವೆ’ ಎಂದು ಅವರು ಹೇಳಿದ್ದಾರೆ.</p>.<p>‘ಏಳು ವರ್ಷಗಳಿಂದ ಮೋದಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ. ಆದರೂ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ’ ಎಂದಿದ್ದಾರೆ.</p>.<p>‘ನಮ್ಮ ದೇಶದಲ್ಲಿ ಈ ಸ್ಥಾನಗಳಿಗೆ ಬೇಕಾಗಿರುವ ಅರ್ಹ ವಕೀಲರು ಮತ್ತು ನ್ಯಾಯಧೀಶರ ಕೊರತೆಗಳಿಲ್ಲ. ಆದರೆ ಕೇಂದ್ರ ಸರ್ಕಾರವು ತನ್ನ ಸಿದ್ಧಾಂತಗಳ ಬಗ್ಗೆ ಸಹಾನುಭೂತಿ ಹೊಂದಿರುವ ಜನರನ್ನು ಈ ಹುದ್ದೆಗಳಿಗಾಗಿ ಹುಡುಕುತ್ತಿದೆ. ಹಾಗಾಗಿ ಈ ಸ್ಥಾನಗಳು ಖಾಲಿಯಾಗಿಯೇ ಉಳಿದಿವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಹಲವು ಹೈಕೋರ್ಟ್ ಮತ್ತು ನ್ಯಾಯಮಂಡಳಿಗಳಲ್ಲಿ ನ್ಯಾಯಾಧೀಶರು, ಅಧ್ಯಕ್ಷರ ಸ್ಥಾನಗಳು ಖಾಲಿ ಇವೆ. ಆದರೆ ಕೇಂದ್ರ ಸರ್ಕಾರ ಈ ಸ್ಥಾನಗಳನ್ನು ಭರ್ತಿ ಮಾಡುವಲ್ಲಿ ವಿಫಲವಾಗಿದೆ’ ಎಂದು ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ದೂರಿದ್ದಾರೆ.</p>.<p>ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ಹೈಕೋರ್ಟ್ಗಳಿಗೆ ಮಂಜೂರಾಗಿರುವ 1,080 ನ್ಯಾಯಮೂರ್ತಿ ಹುದ್ದೆಗಳ ಪೈಕಿ 416 ಖಾಲಿಯಿವೆ. ಡಿಆರ್ಟಿ, ಎನ್ಸಿಎಲ್ಎಟಿ, ಟಿಡಿಎಸ್ಎಟಿ ಸೇರಿದಂತೆ ಹಲವು ನ್ಯಾಯಮಂಡಳಿಗಳಲ್ಲಿ ಅಧ್ಯಕ್ಷರ ಸ್ಥಾನಗಳೂ ಖಾಲಿಯಿವೆ’ ಎಂದು ಅವರು ಹೇಳಿದ್ದಾರೆ.</p>.<p>‘ಏಳು ವರ್ಷಗಳಿಂದ ಮೋದಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದೆ. ಆದರೂ ಈ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ’ ಎಂದಿದ್ದಾರೆ.</p>.<p>‘ನಮ್ಮ ದೇಶದಲ್ಲಿ ಈ ಸ್ಥಾನಗಳಿಗೆ ಬೇಕಾಗಿರುವ ಅರ್ಹ ವಕೀಲರು ಮತ್ತು ನ್ಯಾಯಧೀಶರ ಕೊರತೆಗಳಿಲ್ಲ. ಆದರೆ ಕೇಂದ್ರ ಸರ್ಕಾರವು ತನ್ನ ಸಿದ್ಧಾಂತಗಳ ಬಗ್ಗೆ ಸಹಾನುಭೂತಿ ಹೊಂದಿರುವ ಜನರನ್ನು ಈ ಹುದ್ದೆಗಳಿಗಾಗಿ ಹುಡುಕುತ್ತಿದೆ. ಹಾಗಾಗಿ ಈ ಸ್ಥಾನಗಳು ಖಾಲಿಯಾಗಿಯೇ ಉಳಿದಿವೆ’ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>