ನವದೆಹಲಿ: ’ಒಡಿಶಾ, ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಕೊರತೆ ಉಂಟಾಗಿದ್ದು, ಕೇಂದ್ರ ಸರ್ಕಾರ ಡಿಸೆಂಬರ್ ಅಂತ್ಯದೊಳಗೆ ದೇಶದ ಎಲ್ಲ ವಯಸ್ಕರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡುತ್ತೇವೆಂದು ಸುಳ್ಳು ಭರವಸೆ ನೀಡುತ್ತಿದೆ’ ಎಂದು ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದೇ ವೇಳೆ, ’ಒಡಿಶಾ ಮತ್ತು ದೆಹಲಿಯಲ್ಲಿ ಕೋವಿಡ್ ಲಸಿಕೆಗಳ ಕೊರತೆಯಾಗಿದ್ದು, ಕೇಂದ್ರದನೂತನ ಆರೋಗ್ಯ ಸಚಿವರು, ದೇಶದ ಎಲ್ಲ ರಾಜ್ಯಗಳಿಗೆ ಯಾವುದೇ ಅಡೆತಡೆಯಿಲ್ಲದೇ ಲಸಿಕೆ ಪೂರೈಸಲು ಯಾವ ರೀತಿ ಯೋಜನೆ ರೂಪಿಸಿದ್ದಾರೆ ಎಂಬುದನ್ನು ತಿಳಿಸುತ್ತಾರೆಯೇ’ ಎಂದು ಅವರು ಕೇಳಿದ್ದಾರೆ.
’ದೇಶದಲ್ಲಿ ಲಸಿಕೆ ಕೊರತೆಯಾಗಿದೆ ಎಂಬುದು ಸತ್ಯ. ಲಸಿಕೆ ಉತ್ಪಾದನೆಯನ್ನು ಉತ್ಪ್ರೇಕ್ಷೆ ಮಾಡಲಾಗುತ್ತಿದೆ. ಲಸಿಕೆ ಆಮದು ಮಾಡಿಕೊಳ್ಳುವುದು ನಿಗೂಢವಾದ ವಿಷಯವಾಗಿದೆ. ಡಿಸೆಂಬರ್ 2021ರ ವೇಳೆಗೆ ದೇಶದಲ್ಲಿರುವ ವಯಸ್ಕರಿಗೆ ಪೂರ್ಣಪ್ರಮಾಣದಲ್ಲಿ ಲಸಿಕೆ ನೀಡುತ್ತೇವೆ ಎನ್ನುವುದು ಸುಳ್ಳು ಭರವಸೆ’ ಎಂದು ಚಿದಂಬರಂ ಟ್ವೀಟ್ ಮಾಡಿದ್ದಾರೆ.
After Odisha, Delhi has run out of vaccines
— P. Chidambaram (@PChidambaram_IN) July 13, 2021
Will the new Health Minister @mansukhmandviya please tell us how he plans to ensure regular, adequate and uninterrupted supply of vaccines to the States
’ನೂತನ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ಅವರು ಲಸಿಕೆ ಕಾರ್ಯಕ್ರಮದ ಸತ್ಯಾಸತ್ಯತೆಯನ್ನು ದೇಶಕ್ಕೆ ತಿಳಿಸುತ್ತಾರೆಯೇ’ ಎಂದು ಚಿದಂಬರಂ ಕೇಳಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ’ಒಡಿಶಾ ಮತ್ತು ದೆಹಲಿಯಲ್ಲಿ ಲಸಿಕೆ ಕೊರತೆ ತೀವ್ರವಾಗಿದೆ’ ಎಂದು ಉಲ್ಲೇಖಿಸಿದ್ದಾರೆ.
वैक्सीन की कमी एक सच्चाई है। वैक्सीन उत्पादन अतिशयोक्ति है। वैक्सीन आयात एक रहस्य है। दिसंबर 2021 तक पूरी वयस्क आबादी का टीकाकरण, खाली जुमला है।
— P. Chidambaram (@PChidambaram_IN) July 13, 2021
क्या नए स्वास्थ्य मंत्री @mansukhmandviya टीकाकरण कार्यक्रम के बारे में देश को बताएंगे?
’ಒಡಿಶಾದ 30 ಜಿಲ್ಲೆಗಳ ಪೈಕಿ 24 ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಇದೆ. ಒಡಿಶಾದಲ್ಲಿ ಬಿಜೆಡಿ ನೇತೃತ್ವದ ಸರ್ಕಾರ ಆಡಳಿತ ನಡೆಸುತ್ತಿದ್ದು, ಬಿಜೆಪಿ ಸರ್ಕಾರದ ಮಿತ್ರ ಪಕ್ಷವಾಗಿದೆ. ಲಸಿಕೆ ಕೊರತೆಯ ಕುರಿತ ದೂರನ್ನು ತಳ್ಳಿ ಹಾಕುವ ಕೇಂದ್ರ ಸರ್ಕಾರ, ಒಡಿಶಾ ಪರಿಸ್ಥಿತಿ ಕುರಿತು ಏನು ಹೇಳುತ್ತದೆ’ ಎಂದು ಅವರು ಪ್ರಶ್ನಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.