ಗುವಾಹಟಿ: ಅಸ್ಸಾಂನಲ್ಲಿ ಇತ್ತೀಚೆಗೆ ಬಾಲ್ಯವಿವಾಹಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ 3 ಸಾವಿರಕ್ಕೂ ಹೆಚ್ಚು ಜನರನ್ನು ಬಂಧಿಸಿರುವುದು ಅಲ್ಲಿನ ನಾಗರಿಕ ಸಮಾಜದಲ್ಲಿ ವಿಭಜನೆಯನ್ನು ಸೃಷ್ಟಿಸಿದೆ. ಈ ಸಮಸ್ಯೆಗೆ ಬಂಧನವೊಂದೇ ಪರಿಹಾರವಲ್ಲ, ಬದಲಿಗೆ ಬಾಲ್ಯವಿವಾಹದ ಪರಿಣಾಮಗಳ ಕುರಿತು ಸಮಾಜದಲ್ಲಿ ಜಾಗೃತಿಯನ್ನುಂಟು ಮಾಡುವ ಅವಶ್ಯಕತೆ ಇದೆ ಎಂದು ಅಲ್ಲಿನ ಸಾಮಾಜಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.