‘ಚೀನಾ ಕರೆದಿದ್ದ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಸಭೆಯಲ್ಲಿ ಈ ವಿಷಯದ ಬಗ್ಗೆ ಯಾವುದೇ ನಿರ್ಣಯ ಕೈಗೊಳ್ಳಲಿಲ್ಲ. ಜಮ್ಮು ಮತ್ತು ಕಾಶ್ಮೀರ ವಿಷಯ ಭಾರತ ಮತ್ತು ಪಾಕಿಸ್ತಾನ ನಡುವಣ ದ್ವಿಪಕ್ಷೀಯ ವಿಷಯವಾಗಿದೆ. ಹೀಗಾಗಿ, ಈ ವಿಷಯದ ಚರ್ಚೆಗೆ ಸಮಯ ಮೀಸಲಿಡುವ ಅಗತ್ಯವಿಲ್ಲ ಎಂದು ಸಭೆಯಲ್ಲಿ ಭಾಗವಹಿಸಿದ್ದ ಭದ್ರತಾ ಮಂಡಳಿಯ ಹಲವು ಸದಸ್ಯರು ಪ್ರತಿಪಾದಿಸಿದರು’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿಯ ಕಾಯಂ ಪ್ರತಿನಿಧಿ ಟಿ.ಎಸ್. ತ್ರಿಮೂರ್ತಿ ತಿಳಿಸಿದ್ದಾರೆ.