ಈ ಕುರಿತು ಟ್ವೀಟ್ ಮಾಡಿರುವ ಕೇಂದ್ರ ಸಚಿವ ಕಿರಣ್ ರಿಜಿಜು, 'ಭಾರತೀಯ ಸೇನೆಯು ಕಳುಹಿಸಿದ ಹಾಟ್ಲೈನ್ ಸಂದೇಶಕ್ಕೆ ಚೀನಾದ ಪಿಎಲ್ಎ ಪ್ರತಿಕ್ರಿಯಿಸಿದೆ. ಅರುಣಾಚಲ ಪ್ರದೇಶದಿಂದ ಕಾಣೆಯಾದ ಯುವಕರು ಚೀನಾದ ಕಡೆಯಲ್ಲಿ ಪತ್ತೆಯಾಗಿರುವುದಾಗಿ ಅವರು ಖಚಿತಪಡಿಸಿದ್ದಾರೆ. ಭಾರತಕ್ಕೆ ಅವರನ್ನು ಹಸ್ತಾಂತರಿಸುವ ಪ್ರಕ್ರಿಯೆಗಳನ್ನು ಕೈಗೊಳ್ಳಲಾಗಿದೆ' ಎಂದು ತಿಳಿಸಿದ್ದಾರೆ.