<p><strong>ನವದೆಹಲಿ</strong>: ತನ್ನ ಸಾರ್ವಭೌಮತೆ ಹಾಗೂ ಭೌಗೋಳಿಕ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಚೀನಾ ಬುಧವಾರ ಘೋಷಿಸಿದೆ.</p>.<p>ಪಾಕಿಸ್ತಾನ ಆಕ್ರಮಿಸಿಕೊಂಡಿರುವ ತನ್ನ ಪ್ರದೇಶವನ್ನು ಮರುವಶ ಮಾಡಿಕೊಳ್ಳುವುದಾಗಿ ಇತ್ತೀಚೆಗೆ ಭಾರತ ಹೇಳಿತ್ತು. ಇದರ ಬೆನ್ನಲ್ಲೇ ಈಗ ಪಾಕಿಸ್ತಾನಕ್ಕೆ ಚೀನಾ ಈ ಅಭಯ ನೀಡಿರುವುದು ಗಮನಾರ್ಹ.</p>.<p>ಚೀನಾಕ್ಕೆ ಭೇಟಿ ನೀಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರು, ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಈ ವೇಳೆ, ಜಿನ್ಪಿಂಗ್ ಅವರಿಂದ ಈ ಭರವಸೆ ಹೊರಬಿದ್ದಿದೆ.</p>.<p>ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಮೂಲಕ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಷಿ ಹಾಗೂ ಶರೀಫ್ ಚರ್ಚಿಸಿದ್ದಾರೆ.</p>.<p>ಈ ಬೆಳವಣಿಗೆ ಬಗ್ಗೆ ಭಾರತ ಕಳವಳ ಹಾಗೂ ಆಕ್ಷೇಪ ವ್ಯಕ್ತಪಡಿಸಿದೆ. ಉಭಯ ದೇಶಗಳ ಈ ನಡೆ ದೇಶದ ಸಾರ್ವಭೌಮತೆಯನ್ನು ಕುಗ್ಗಿಸುವ ಹುನ್ನಾರವಾಗಿದೆ ಎಂದೂ ಭಾರತ ಹೇಳಿದೆ.</p>.<p>ಗಿಲ್ಗಿಟ್, ಬಾಲ್ಟಿಸ್ತಾನ ಸೇರಿದಂತೆ ಪಾಕಿಸ್ತಾನ ಆಕ್ರಮಿತ ಪ್ರದೇಶಗಳು ಮರುವಶವಾಗದ ಹೊರತು ಭಾರತದ ಅಭಿವೃದ್ಧಿಯ ಪಯಣ ಪೂರ್ಣಗೊಳ್ಳುವುದಿಲ್ಲ ಎಂದು ಅಕ್ಟೋಬರ್ 27ರಂದು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ತನ್ನ ಸಾರ್ವಭೌಮತೆ ಹಾಗೂ ಭೌಗೋಳಿಕ ಸಮಗ್ರತೆಯನ್ನು ಕಾಪಾಡಿಕೊಳ್ಳಲು ಪಾಕಿಸ್ತಾನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಚೀನಾ ಬುಧವಾರ ಘೋಷಿಸಿದೆ.</p>.<p>ಪಾಕಿಸ್ತಾನ ಆಕ್ರಮಿಸಿಕೊಂಡಿರುವ ತನ್ನ ಪ್ರದೇಶವನ್ನು ಮರುವಶ ಮಾಡಿಕೊಳ್ಳುವುದಾಗಿ ಇತ್ತೀಚೆಗೆ ಭಾರತ ಹೇಳಿತ್ತು. ಇದರ ಬೆನ್ನಲ್ಲೇ ಈಗ ಪಾಕಿಸ್ತಾನಕ್ಕೆ ಚೀನಾ ಈ ಅಭಯ ನೀಡಿರುವುದು ಗಮನಾರ್ಹ.</p>.<p>ಚೀನಾಕ್ಕೆ ಭೇಟಿ ನೀಡಿರುವ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಶರೀಫ್ ಅವರು, ಅಧ್ಯಕ್ಷ ಷಿ ಜಿನ್ಪಿಂಗ್ ಅವರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು. ಈ ವೇಳೆ, ಜಿನ್ಪಿಂಗ್ ಅವರಿಂದ ಈ ಭರವಸೆ ಹೊರಬಿದ್ದಿದೆ.</p>.<p>ಚೀನಾ–ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಯೋಜನೆಯನ್ನು ತ್ವರಿತವಾಗಿ ಅನುಷ್ಠಾನಗೊಳಿಸುವ ಮೂಲಕ ಉಭಯ ದೇಶಗಳ ನಡುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲು ಷಿ ಹಾಗೂ ಶರೀಫ್ ಚರ್ಚಿಸಿದ್ದಾರೆ.</p>.<p>ಈ ಬೆಳವಣಿಗೆ ಬಗ್ಗೆ ಭಾರತ ಕಳವಳ ಹಾಗೂ ಆಕ್ಷೇಪ ವ್ಯಕ್ತಪಡಿಸಿದೆ. ಉಭಯ ದೇಶಗಳ ಈ ನಡೆ ದೇಶದ ಸಾರ್ವಭೌಮತೆಯನ್ನು ಕುಗ್ಗಿಸುವ ಹುನ್ನಾರವಾಗಿದೆ ಎಂದೂ ಭಾರತ ಹೇಳಿದೆ.</p>.<p>ಗಿಲ್ಗಿಟ್, ಬಾಲ್ಟಿಸ್ತಾನ ಸೇರಿದಂತೆ ಪಾಕಿಸ್ತಾನ ಆಕ್ರಮಿತ ಪ್ರದೇಶಗಳು ಮರುವಶವಾಗದ ಹೊರತು ಭಾರತದ ಅಭಿವೃದ್ಧಿಯ ಪಯಣ ಪೂರ್ಣಗೊಳ್ಳುವುದಿಲ್ಲ ಎಂದು ಅಕ್ಟೋಬರ್ 27ರಂದು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>