<p><strong>ಚೆನ್ನೈ:</strong> ಕ್ಯಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ.</p>.<p>‘ವರುಣ್ ಸಿಂಗ್ ಅವರ ಪರಿಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಅಗತ್ಯವಿದ್ದರೆ ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಿಂದ, ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗುವುದು,’ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ವರುಣ್ ಸಿಂಗ್ ಅವರ ಸ್ಥಿತಿಯ ಬಗ್ಗೆ ರಾಜ್ಯಸಭೆಗೆ ಗುರುವಾರ ಮಾಹಿತಿ ಒದಗಿಸಿದರು. ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ್ ಸಿಂಗ್ ಅವರು ಜೀವ ರಕ್ಷಕ ವ್ಯವಸ್ಥೆಯಲ್ಲಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ,’ ಎಂದು ಅವರು ತಿಳಿಸಿದರು.</p>.<p>ದುರಂತದಲ್ಲಿ ಮಡಿದವರಿಗೆ ರಾಜ್ಯಸಭೆಯಲ್ಲಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅಂತ್ಯಕ್ರಿಯೆಯನ್ನು ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕ್ಯಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಜೀವನ್ಮರಣ ಹೋರಾಟ ನಡೆಸುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ.</p>.<p>‘ವರುಣ್ ಸಿಂಗ್ ಅವರ ಪರಿಸ್ಥಿತಿ ಗಂಭೀರವಾಗಿದೆ. ಆದರೂ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಅಗತ್ಯವಿದ್ದರೆ ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಿಂದ, ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರ ಮಾಡಲಾಗುವುದು,’ ಎಂದು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.</p>.<p>ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ವರುಣ್ ಸಿಂಗ್ ಅವರ ಸ್ಥಿತಿಯ ಬಗ್ಗೆ ರಾಜ್ಯಸಭೆಗೆ ಗುರುವಾರ ಮಾಹಿತಿ ಒದಗಿಸಿದರು. ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ್ ಸಿಂಗ್ ಅವರು ಜೀವ ರಕ್ಷಕ ವ್ಯವಸ್ಥೆಯಲ್ಲಿದ್ದಾರೆ. ಅವರನ್ನು ಉಳಿಸಿಕೊಳ್ಳಲು ಸರ್ವ ಪ್ರಯತ್ನಗಳನ್ನೂ ಮಾಡಲಾಗುತ್ತಿದೆ,’ ಎಂದು ಅವರು ತಿಳಿಸಿದರು.</p>.<p>ದುರಂತದಲ್ಲಿ ಮಡಿದವರಿಗೆ ರಾಜ್ಯಸಭೆಯಲ್ಲಿ ಎರಡು ನಿಮಿಷಗಳ ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು. ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅಂತ್ಯಕ್ರಿಯೆಯನ್ನು ಸಕಲ ಮಿಲಿಟರಿ ಗೌರವಗಳೊಂದಿಗೆ ನಡೆಸಲಾಗುವುದು ಎಂದು ರಕ್ಷಣಾ ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>