ಭುವನೇಶ್ವರ/ಬಾಲಸೋರ್: ಒಡಿಶಾದ ಚಾಂಡೀಪುರದಲ್ಲಿರುವ ರಕ್ಷಣಾ ಸಂಶೋಧನಾ ಅಭಿವೃದ್ಧಿ ಸಂಸ್ಥೆಯ(ಡಿಆರ್ಡಿಒ) ‘ಐಟಿಆರ್’ ಪರೀಕ್ಷಾ ಕೇಂದ್ರದಲ್ಲಿನ ರಹಸ್ಯ ಮಾಹಿತಿಗಳು ಸೋರಿಕೆಯಾಗಿವೆ ಎನ್ನಲಾದ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ಮಂಗಳವಾರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿದ್ದ ನಾಲ್ವರನ್ನು ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿತ್ತು. ವಿದೇಶಿ ಏಜೆಂಟರಿಗೆ ಮಾಹಿತಿಗಳನ್ನು ನೀಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಪ್ರಕರಣದಲ್ಲಿ ಹನಿ ಟ್ರ್ಯಾಪ್ ಸಹ ನಡೆದಿರುವ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಬಾಲಸೋರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧಾನ್ಸು ಶೇಖರ್ ಮಿಶ್ರಾ ತಿಳಿಸಿದ್ದಾರೆ.