<p><strong>ಕೋಲ್ಕತ್ತ:</strong> ಕೂಚ್ ಬಿಹಾರ್ನ ಸೀತಾಲಕುಚಿಯಲ್ಲಿ ಮತದಾನದ ಸಂದರ್ಭ ಸಿಐಎಸ್ಎಫ್ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ಪಶ್ಚಿಮ ಬಂಗಾಳ ಸಿಐಡಿ ತನಿಖೆ ಕೈಗೆತ್ತಿಕೊಂಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ತನಿಖೆಗಾಗಿ ಅಪರಾಧ ತನಿಖಾ ದಳವು (ಸಿಐಡಿ) ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ತನಿಖಾ ತಂಡವು ಸೀತಾಲಕುಚಿಯ ಜೋರ್ಪಕ್ತಿಯಲ್ಲಿನ 126/5ನೇ ಮತಗಟ್ಟೆಗೆ ಭೇಟಿ ನೀಡಲಿದೆ. ಸಾಕ್ಷಿಗಳಿಂದ ಮಾಹಿತಿ ಕಲೆಹಾಕಲಿರುವ ತನಿಖಾ ತಂಡವು ವಿಡಿಯೊ ದೃಶ್ಯಾವಳಿಯನ್ನೂ ಪರಿಶೀಲಿಸಲಿದೆ. ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊದ ಸತ್ಯಾಸತ್ಯತೆ ಅರಿಯಲು ವಿಧಿವಿಜ್ಞಾನ ಪ್ರಯೋಗಕ್ಕೂ ಕಳುಹಿಸಿಕೊಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/election-commission-adjourns-polling-in-cooch-behars-poll-station-after-four-shot-dead-821167.html" target="_blank">ಪಶ್ಚಿಮ ಬಂಗಾಳ: ಕೂಚ್ ಬಿಹಾರ್ ಘರ್ಷಣೆಯಲ್ಲಿ ಐವರು ಸಾವು, ಮತದಾನ ಮುಂದೂಡಿಕೆ</a></p>.<p>ಘಟನೆ ನಡೆದ ಬಳಿಕ ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಂದಲೂ ತನಿಖಾ ತಂಡ ಮಾಹಿತಿ ಕಲೆಹಾಕಲಿದೆ ಎಂದು ಅವರು ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ನಾಲ್ಕನೇ ಹಂತದ ಮತದಾನದ ಸಂದರ್ಭ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿ ಸಿಐಎಸ್ಎಫ್ ಸಿಬ್ಬಂದಿ ‘ಸ್ವರಕ್ಷಣೆ’ಗಾಗಿ ನಡೆಸಿದ ಗೋಲಿಬಾರ್ನಲ್ಲಿ ನಾಲ್ವರು ಮೃತಪಟ್ಟಿದ್ದರು. ಬಳಿಕ ಮತದಾನ ಮುಂದೂಡಿಕೆ ಮಾಡಲಾಗಿತ್ತು. ಘಟನೆಯು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ:</strong> ಕೂಚ್ ಬಿಹಾರ್ನ ಸೀತಾಲಕುಚಿಯಲ್ಲಿ ಮತದಾನದ ಸಂದರ್ಭ ಸಿಐಎಸ್ಎಫ್ (ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ) ಗುಂಡಿನ ದಾಳಿಯಲ್ಲಿ ನಾಲ್ವರು ಮೃತಪಟ್ಟ ಬಗ್ಗೆ ಪಶ್ಚಿಮ ಬಂಗಾಳ ಸಿಐಡಿ ತನಿಖೆ ಕೈಗೆತ್ತಿಕೊಂಡಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.</p>.<p>ತನಿಖೆಗಾಗಿ ಅಪರಾಧ ತನಿಖಾ ದಳವು (ಸಿಐಡಿ) ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಲಾಗಿದೆ. ತನಿಖಾ ತಂಡವು ಸೀತಾಲಕುಚಿಯ ಜೋರ್ಪಕ್ತಿಯಲ್ಲಿನ 126/5ನೇ ಮತಗಟ್ಟೆಗೆ ಭೇಟಿ ನೀಡಲಿದೆ. ಸಾಕ್ಷಿಗಳಿಂದ ಮಾಹಿತಿ ಕಲೆಹಾಕಲಿರುವ ತನಿಖಾ ತಂಡವು ವಿಡಿಯೊ ದೃಶ್ಯಾವಳಿಯನ್ನೂ ಪರಿಶೀಲಿಸಲಿದೆ. ಘಟನೆಗೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೊದ ಸತ್ಯಾಸತ್ಯತೆ ಅರಿಯಲು ವಿಧಿವಿಜ್ಞಾನ ಪ್ರಯೋಗಕ್ಕೂ ಕಳುಹಿಸಿಕೊಡಲಾಗುವುದು ಎಂದೂ ಅವರು ತಿಳಿಸಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/election-commission-adjourns-polling-in-cooch-behars-poll-station-after-four-shot-dead-821167.html" target="_blank">ಪಶ್ಚಿಮ ಬಂಗಾಳ: ಕೂಚ್ ಬಿಹಾರ್ ಘರ್ಷಣೆಯಲ್ಲಿ ಐವರು ಸಾವು, ಮತದಾನ ಮುಂದೂಡಿಕೆ</a></p>.<p>ಘಟನೆ ನಡೆದ ಬಳಿಕ ಸ್ಥಳಕ್ಕೆ ಧಾವಿಸಿದ್ದ ಸ್ಥಳೀಯ ಪೊಲೀಸ್ ಸಿಬ್ಬಂದಿ ಮತ್ತು ಅಧಿಕಾರಿಗಳಿಂದಲೂ ತನಿಖಾ ತಂಡ ಮಾಹಿತಿ ಕಲೆಹಾಕಲಿದೆ ಎಂದು ಅವರು ಹೇಳಿದ್ದಾರೆ.</p>.<p>ಪಶ್ಚಿಮ ಬಂಗಾಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯ ನಾಲ್ಕನೇ ಹಂತದ ಮತದಾನದ ಸಂದರ್ಭ ಸೀತಾಲಕುಚಿ ಕ್ಷೇತ್ರದ 126ನೇ ಸಂಖ್ಯೆಯ ಮತಗಟ್ಟೆಯಲ್ಲಿ ಸಿಐಎಸ್ಎಫ್ ಸಿಬ್ಬಂದಿ ‘ಸ್ವರಕ್ಷಣೆ’ಗಾಗಿ ನಡೆಸಿದ ಗೋಲಿಬಾರ್ನಲ್ಲಿ ನಾಲ್ವರು ಮೃತಪಟ್ಟಿದ್ದರು. ಬಳಿಕ ಮತದಾನ ಮುಂದೂಡಿಕೆ ಮಾಡಲಾಗಿತ್ತು. ಘಟನೆಯು ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>