ಕೋಲ್ಕತ್ತ: ‘ಕಾನೂನು ಶಾಲೆಗಳಿಂದ ಉತ್ತೀರ್ಣರಾಗಿ ಹೊರಬರುವ ಪದವೀಧರರು ಸಮಾಜ ಮತ್ತು ಮನುಕುಲದ ಬಗ್ಗೆ ಕರುಣೆ ಬೆಳೆಸಿಕೊಳ್ಳಬೇಕು’ ಎಂದು ಸುಪ್ರೀಂ ಕೋರ್ಟ್ನಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು ಭಾನುವಾರ ಸಲಹೆ ನೀಡಿದ್ದಾರೆ.
ಪಶ್ಚಿಮ ಬಂಗಾಳ ರಾಷ್ಟ್ರೀಯ ನ್ಯಾಯಾಂಗ ವಿಜ್ಞಾನ ವಿಶ್ವವಿದ್ಯಾಲಯದ (ಡಬ್ಲ್ಯುಬಿಎನ್ಯುಜೆಎಸ್) 14ನೇ ಘಟಿಕೋತ್ಸವದಲ್ಲಿ ಮಾತನಾಡಿದ ಅವರು, ‘ವ್ಯಕ್ತಿಯ ಸಾಮರ್ಥ್ಯ ವೃದ್ಧಿ ಎಂದಿಗೂ ನಿಲ್ಲುವುದಿಲ್ಲ, ಸಾಯುವವರೆಗೂ ಕಲಿಯುವುದು ಇರುತ್ತದೆ. ಹಾಗಾಗಿ ಪ್ರತಿ ಸಲಹೆಗೂ ನಿಮ್ಮ ಮನಸ್ಸನ್ನು ತೆರೆದಿಡಿ. ಅಲ್ಲಿ ನೀವು ಒಳ್ಳೆಯ ಸ್ಫೂರ್ತಿಯನ್ನು ಪಡೆಯುವಿರಿ’ ಎಂದರು.
‘ವಿವಿಧ ಕ್ಷೇತ್ರಗಳಲ್ಲಿ ಸಾಮರ್ಥ್ಯ ವರ್ಧನೆಯ ಗುಣಲಕ್ಷಣಗಳು ಮತ್ತು ಮಾನವಕುಲದ ಬಗ್ಗೆ ರೂಢಿಸಿಕೊಳ್ಳುವ ಕರುಣೆಯು ಯಾವುದೇ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವಲ್ಲಿ ನಮ್ಮನ್ನು ಎಂದಿಗೂ ವಿಫಲಗೊಳಿಸುವುದಿಲ್ಲ’ ಎಂದೂ ಸಿಜೆಐ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.