ಪ್ರಯಾಗರಾಜ್ನಲ್ಲಿ ಅಲಹಾಬಾದ್ ಹೈಕೋರ್ಟ್ನ ಹೊಸ ಸಂಕೀರ್ಣಕ್ಕೆ ಶಂಕುಸ್ಥಾಪನೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ನ್ಯಾಯಮೂರ್ತಿಗಳು, ‘1975 ರಲ್ಲಿ, ಅಲಹಾಬಾದ್ ಹೈಕೋರ್ಟ್ನ ನ್ಯಾಯಮೂರ್ತಿಯಾಗಿದ್ದ ಜಗಮೋಹನಲಾಲ್ ಸಿನ್ಹಾ ಅವರು ಇಂದಿರಾಗಾಂಧಿ ಅವರನ್ನು ಅನರ್ಹಗೊಳಿಸಿ, ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ತೀರ್ಪು ನೀಡಿದರು. ಇದು ಅತ್ಯಂತ ಧೈರ್ಯದ ತೀರ್ಪು. ಇದೇ ತೀರ್ಪು ತುರ್ತುಪರಿಸ್ಥಿತಿ ಘೋಷಣೆಗೆ ನೇರವಾಗಿ ಕಾರಣವಾಯಿತೆಂದು ಹೇಳಬಹುದು, "ಎಂದು ತಿಳಿಸಿದರು.