ಈ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ, ’ನಾನು ಎರಡು ರಾಜ್ಯಗಳಿಗೆ ಸಂಬಂಧಪಟ್ಟಿದ್ದೇನೆ. ಹೀಗಾಗಿ, ಈ ವಿಷಯದ ಬಗ್ಗೆ ಕಾನೂನು ಪ್ರಕಾರ ವಿಚಾರಣೆ ನಡೆಸುವುದಿಲ್ಲ. ಮಧ್ಯಸ್ಥಿಕೆ ಮೂಲಕ ಇತ್ಯರ್ಥಗೊಳಿಸಲು ದಯವಿಟ್ಟು ಪ್ರಯತ್ನಿಸಿ. ಇದಕ್ಕೆ ನೆರವು ನೀಡಲು ಸಿದ್ಧ. ಇಲ್ಲದಿದ್ದರೆ ಈ ಪ್ರಕರಣವನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸುತ್ತೇನೆ’ ಎಂದು ಹೇಳಿದರು.