<p><strong>ಲಖನೌ: </strong>ತರಗತಿಯಲ್ಲಿ ಮೊಬೈಲ್ ಬಳಸಬೇಡ ಎಂದು ಶಿಕ್ಷಕರು ಬೈದಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ತನ್ನ ಇಬ್ಬರು ಸ್ನೇಹಿತರ ಜೊತೆ ತೆರಳಿ ಶಿಕ್ಷಕರ ಮೇಲೇ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಿಂದ ವರದಿಯಾಗಿದೆ.<br /><br />ಗೋರಖ್ಪುರದ ಜುಬಿಲಿ ಇಂಟರ್ ಕಾಲೇಜ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಕಪ್ಪು ಮುಖವಾಡಗಳನ್ನು ಧರಿಸಿದ್ದ ವಿದ್ಯಾರ್ಥಿಯು ತನ್ನ ಇಬ್ಬರು ಸ್ನೇಹಿತರೊಂದಿಗೆ ತೆರಳಿ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಕೊತ್ವಾಲಿ ಇನ್ಸ್ಪೆಕ್ಟರ್ ಕಲ್ಯಾಣ್ ಸಿಂಗ್ ಸಾಗರ್ ತಿಳಿಸಿದ್ದಾರೆ.</p>.<p>ಘಟನೆಯ ಸಂಪೂರ್ಣ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಸಾಗರ್ ಹೇಳಿದ್ದಾರೆ, ಶಿಕ್ಷಕ ಸಯ್ಯದ್ ವಾಸಿಕ್ ಅಲಿ ಅವರ ದೂರಿನ ಮೇರೆಗೆ ಮೂವರ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ.</p>.<p>ಪ್ರಮುಖ ಆರೋಪಿ 9 ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿ ಮಕ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಬಳಿಕ ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉಳಿದ ಇಬ್ಬರು ಆರೋಪಿಗಳನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<p>ಕೆಲವು ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಕರನ್ನು ಥಳಿಸಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ನಂದ ಪ್ರಸಾದ್ ಯಾದವ್ ಹೇಳಿದ್ದಾರೆ. 9 ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯಿಂದ ವಜಾಮಾಡಿದ್ದು, ಉಳಿದ ಇಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಖನೌ: </strong>ತರಗತಿಯಲ್ಲಿ ಮೊಬೈಲ್ ಬಳಸಬೇಡ ಎಂದು ಶಿಕ್ಷಕರು ಬೈದಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ತನ್ನ ಇಬ್ಬರು ಸ್ನೇಹಿತರ ಜೊತೆ ತೆರಳಿ ಶಿಕ್ಷಕರ ಮೇಲೇ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಗೋರಖ್ ಪುರದಿಂದ ವರದಿಯಾಗಿದೆ.<br /><br />ಗೋರಖ್ಪುರದ ಜುಬಿಲಿ ಇಂಟರ್ ಕಾಲೇಜ್ ಆವರಣದಲ್ಲಿ ಈ ಘಟನೆ ನಡೆದಿದ್ದು, ಕಪ್ಪು ಮುಖವಾಡಗಳನ್ನು ಧರಿಸಿದ್ದ ವಿದ್ಯಾರ್ಥಿಯು ತನ್ನ ಇಬ್ಬರು ಸ್ನೇಹಿತರೊಂದಿಗೆ ತೆರಳಿ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಕೊತ್ವಾಲಿ ಇನ್ಸ್ಪೆಕ್ಟರ್ ಕಲ್ಯಾಣ್ ಸಿಂಗ್ ಸಾಗರ್ ತಿಳಿಸಿದ್ದಾರೆ.</p>.<p>ಘಟನೆಯ ಸಂಪೂರ್ಣ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ಸಾಗರ್ ಹೇಳಿದ್ದಾರೆ, ಶಿಕ್ಷಕ ಸಯ್ಯದ್ ವಾಸಿಕ್ ಅಲಿ ಅವರ ದೂರಿನ ಮೇರೆಗೆ ಮೂವರ ವಿರುದ್ಧ ಕೊಲೆ ಯತ್ನದ ಪ್ರಕರಣವನ್ನು ದಾಖಲಿಸಲಾಗಿದೆ.</p>.<p>ಪ್ರಮುಖ ಆರೋಪಿ 9 ನೇ ತರಗತಿ ವಿದ್ಯಾರ್ಥಿಯನ್ನು ಬಂಧಿಸಿ ಮಕ್ಕಳ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಬಳಿಕ ಬಾಲಾಪರಾಧಿ ಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಉಳಿದ ಇಬ್ಬರು ಆರೋಪಿಗಳನ್ನು ಗುರುತಿಸಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.</p>.<p>ಕೆಲವು ವಿದ್ಯಾರ್ಥಿಗಳು ಕಂಪ್ಯೂಟರ್ ಶಿಕ್ಷಕರನ್ನು ಥಳಿಸಿದ್ದಾರೆ ಎಂದು ಕಾಲೇಜು ಪ್ರಾಂಶುಪಾಲ ನಂದ ಪ್ರಸಾದ್ ಯಾದವ್ ಹೇಳಿದ್ದಾರೆ. 9 ನೇ ತರಗತಿಯ ವಿದ್ಯಾರ್ಥಿಯನ್ನು ಶಾಲೆಯಿಂದ ವಜಾಮಾಡಿದ್ದು, ಉಳಿದ ಇಬ್ಬರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>