<p><strong>ನವದೆಹಲಿ: </strong>ಹವಾಮಾನ ವೈಪರೀತ್ಯದಿಂದಾಗಿ ಗಂಭೀರ ಸನ್ನಿವೇಶಗಳ ಕುರಿತು ನಿಖರವಾಗಿ ಮುನ್ಸೂಚನೆಗಳನ್ನು ನೀಡಲು ತೊಡಕಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮಹಾ ನಿರ್ದೇಶಕ ಮೃತ್ಯುಂಜಯಮೊಹಪಾತ್ರ ಹೇಳಿದ್ದಾರೆ.</p>.<p>ಪ್ರಪಂಚದಾದ್ಯಂತ ಇರುವ ಎಲ್ಲ ಹವಾಮಾನ ಇಲಾಖೆಗಳಿಗೂಈ ಸಮಸ್ಯೆ ಎದುರಾಗಿದೆ ಎಂದಿರುವ ಮೃತ್ಯುಂಜಯ,ಐಎಂಡಿಯು ಸವಾಲುಗಳಿಗೆ ಅನುಗುಣವಾಗಿ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೆಚ್ಚೆಚ್ಚು ರಾಡಾರ್ಗಳನ್ನು ಅಳವಡಿಸುತ್ತಿದೆ ಎಂದೂ ತಿಳಿಸಿದ್ದಾರೆ.</p>.<p>ಸಂದರ್ಶನದಲ್ಲಿ ಮಾತನಾಡಿರುವಐಎಂಡಿ ಮಹಾ ನಿರ್ದೇಶಕ,ಮುಂಗಾರು ಮಳೆಯು ದೇಶದಲ್ಲಿ ಯಾವುದೇ ಮಹತ್ವದ ಪ್ರವೃತ್ತಿಯನ್ನು ತೋರಿಸಿಲ್ಲ. ಭಾರೀ ಮಳೆ ಸಂದರ್ಭಗಳು ಏರಿಕೆಯಾಗಿದ್ದು, ಅಲ್ಪ ಮಳೆ ಸುರಿಯುವಿಕೆ ಕುಸಿದಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಪರಿಣಾಮ ಆಧಾರಿತ ಮುನ್ಸೂಚನೆ ನೀಡುವುದು 2025ರ ಹೊತ್ತಿಗೆ ಹೆಚ್ಚಿನ ನಿಖರತೆಯನ್ನು ಕಂಡುಕೊಳ್ಳಲು ನೆರವಾಗಲಿದೆ. ಐಎಂಡಿಯು ಮುಂಬರುವ ವರ್ಷಗಳಲ್ಲಿ ಪಂಚಾಯಿತಿ ಮಟ್ಟದ ಸಮುದಾಯಗಳು, ನಗರಗಳ ನಿರ್ದಿಷ್ಟ ಪ್ರದೇಶಗಳಿಗೂ ಮುನ್ಸೂಚನೆಗಳನ್ನು ನೀಡುವ ಸಾಮರ್ಥ್ಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಹವಾಮಾನ ವೈಪರೀತ್ಯವು ವಾತಾವರಣದಲ್ಲಿಅಸ್ಥಿರತೆಯನ್ನು ಹೆಚ್ಚಿಸಿದೆ. ಗುಡುಗು, ಮಿಂಚು ಹಾಗೂ ಭಾರಿ ಮಳೆಗೆ ಕಾರಣವಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿನ ಚಂಡಮಾರುತ ತೀವ್ರತೆಯೂ ಏರುತ್ತಿದೆ ಎಂದು ವಿವರಿಸಿದ್ದಾರೆ.</p>.<p>ವಾತಾವರಣದಲ್ಲಿನ ಇಂತಹ ಬೆಳವಣಿಗೆಗಳುನಿರಂತರವಾಗಿ ಹೆಚ್ಚುತ್ತಿರುವುದು ಮುನ್ಸೂಚನೆ ನೀಡುವಿಕೆಗೆ ಸವಾಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಭಾರಿ ಮಳೆಯನ್ನು ಅಂದಾಜಿಸುವ ಸಾಮರ್ಥ್ಯಕ್ಕೂ ಅಡ್ಡಿಯಾಗುತ್ತಿದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹವಾಮಾನ ವೈಪರೀತ್ಯದಿಂದಾಗಿ ಗಂಭೀರ ಸನ್ನಿವೇಶಗಳ ಕುರಿತು ನಿಖರವಾಗಿ ಮುನ್ಸೂಚನೆಗಳನ್ನು ನೀಡಲು ತೊಡಕಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮಹಾ ನಿರ್ದೇಶಕ ಮೃತ್ಯುಂಜಯಮೊಹಪಾತ್ರ ಹೇಳಿದ್ದಾರೆ.</p>.<p>ಪ್ರಪಂಚದಾದ್ಯಂತ ಇರುವ ಎಲ್ಲ ಹವಾಮಾನ ಇಲಾಖೆಗಳಿಗೂಈ ಸಮಸ್ಯೆ ಎದುರಾಗಿದೆ ಎಂದಿರುವ ಮೃತ್ಯುಂಜಯ,ಐಎಂಡಿಯು ಸವಾಲುಗಳಿಗೆ ಅನುಗುಣವಾಗಿ ತನ್ನ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದೆ. ಹೆಚ್ಚೆಚ್ಚು ರಾಡಾರ್ಗಳನ್ನು ಅಳವಡಿಸುತ್ತಿದೆ ಎಂದೂ ತಿಳಿಸಿದ್ದಾರೆ.</p>.<p>ಸಂದರ್ಶನದಲ್ಲಿ ಮಾತನಾಡಿರುವಐಎಂಡಿ ಮಹಾ ನಿರ್ದೇಶಕ,ಮುಂಗಾರು ಮಳೆಯು ದೇಶದಲ್ಲಿ ಯಾವುದೇ ಮಹತ್ವದ ಪ್ರವೃತ್ತಿಯನ್ನು ತೋರಿಸಿಲ್ಲ. ಭಾರೀ ಮಳೆ ಸಂದರ್ಭಗಳು ಏರಿಕೆಯಾಗಿದ್ದು, ಅಲ್ಪ ಮಳೆ ಸುರಿಯುವಿಕೆ ಕುಸಿದಿದೆ ಎಂದು ಮಾಹಿತಿ ನೀಡಿದ್ದಾರೆ.</p>.<p>ಪರಿಣಾಮ ಆಧಾರಿತ ಮುನ್ಸೂಚನೆ ನೀಡುವುದು 2025ರ ಹೊತ್ತಿಗೆ ಹೆಚ್ಚಿನ ನಿಖರತೆಯನ್ನು ಕಂಡುಕೊಳ್ಳಲು ನೆರವಾಗಲಿದೆ. ಐಎಂಡಿಯು ಮುಂಬರುವ ವರ್ಷಗಳಲ್ಲಿ ಪಂಚಾಯಿತಿ ಮಟ್ಟದ ಸಮುದಾಯಗಳು, ನಗರಗಳ ನಿರ್ದಿಷ್ಟ ಪ್ರದೇಶಗಳಿಗೂ ಮುನ್ಸೂಚನೆಗಳನ್ನು ನೀಡುವ ಸಾಮರ್ಥ್ಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>ಹವಾಮಾನ ವೈಪರೀತ್ಯವು ವಾತಾವರಣದಲ್ಲಿಅಸ್ಥಿರತೆಯನ್ನು ಹೆಚ್ಚಿಸಿದೆ. ಗುಡುಗು, ಮಿಂಚು ಹಾಗೂ ಭಾರಿ ಮಳೆಗೆ ಕಾರಣವಾಗುತ್ತಿದೆ. ಅರಬ್ಬೀ ಸಮುದ್ರದಲ್ಲಿನ ಚಂಡಮಾರುತ ತೀವ್ರತೆಯೂ ಏರುತ್ತಿದೆ ಎಂದು ವಿವರಿಸಿದ್ದಾರೆ.</p>.<p>ವಾತಾವರಣದಲ್ಲಿನ ಇಂತಹ ಬೆಳವಣಿಗೆಗಳುನಿರಂತರವಾಗಿ ಹೆಚ್ಚುತ್ತಿರುವುದು ಮುನ್ಸೂಚನೆ ನೀಡುವಿಕೆಗೆ ಸವಾಲಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಭಾರಿ ಮಳೆಯನ್ನು ಅಂದಾಜಿಸುವ ಸಾಮರ್ಥ್ಯಕ್ಕೂ ಅಡ್ಡಿಯಾಗುತ್ತಿದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>