ಬೆಂಗಳೂರು: ತಮಿಳುನಾಡಿನ ವಂಡಲೂರು ಜೈವಿಕ ಉದ್ಯಾನದಲ್ಲಿ ಕೋವಿಡ್ 19 ಸೋಂಕಿನಿಂದ ಸಿಂಹಿಣಿಯೊಂದು ಮೃತಪಟ್ಟು, ಉಳಿದ ಸಿಂಹಗಳಿಗೆ ಸೋಂಕು ಹರಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ದೇಶದ ಎಲ್ಲ ಹುಲಿಯೋಜನೆ ಪ್ರದೇಶಗಳಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಲಾಗಿದೆ.