ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಡುಕ ಸ್ನೇಹಿತ ಕೊಟ್ಟ ಅರೆಬರೆ ಸುಳಿವು: ಕೊಲೆಗಾರರ ಸೆರೆ ಹಿಡಿದ ಪೊಲೀಸರು

Last Updated 25 ಮೇ 2022, 11:27 IST
ಅಕ್ಷರ ಗಾತ್ರ

ನೋಯ್ಡಾ: ಕುಡುಕ ಸ್ನೇಹಿತ ಅರೆಬರೆ ನೆನಪಿಟ್ಟುಕೊಂಡಿದ್ದ ಗಾಡಿ ನಂಬರ್‌, ಬಣ್ಣದ ಸಹಾಯದಿಂದ ಕೊಲೆಗಾರರನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಮೇ 14ರಂದು ಕ್ಷುಲ್ಲಕ ಕಾರಣಕ್ಕೆ 23 ವರ್ಷದ ಯುವಕನನ್ನು ಸಿಮೆಂಟ್‌ ಇಟ್ಟಿಗೆಯಿಂದ ಹೊಡೆದು ಕೊಲೆ ಮಾಡಲಾಗಿತ್ತು. ರಾತ್ರಿ ವೇಳೆ, ನಿರ್ಜನ ಪ್ರದೇಶದಲ್ಲಿ ನಡೆದಿದ್ದ ಕೃತ್ಯದ ಬಗ್ಗೆ ಸಿಸಿಟಿವಿ ದೃಶ್ಯಾವಳಿ ಸೇರಿದಂತೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.

ಭಾಂಗೆಲ್‌ ಪ್ರದೇಶದ ಅಭಯ್‌ ತ್ಯಾಗಿ ಮತ್ತು ಆತನ ಇಬ್ಬರು ಸ್ನೇಹಿತರು ಮದ್ಯ ಸೇವಿಸಿ ಮನೆಗೆ ವಾಪಸ್‌ ಆಗುತ್ತಿದ್ದರು. ಬೈಕ್‌ನಲ್ಲಿ ಬಂದ ಮೂವರು ಅಪರಿಚಿತರ ಜೊತೆ ಜಗಳ ನಡೆದಿದ್ದು, ತ್ಯಾಗಿಯ ಕೊಲೆಯೊಂದಿಗೆ ಅಂತ್ಯ ಕಂಡಿತ್ತು. ಬೈಕ್‌ನಲ್ಲಿ ಬಂದಿದ್ದ ಮೂವರೂ ಸ್ಥಳದಿಂದ ಪರಾರಿಯಾಗಿದ್ದರು.

ಆರೋಪಿಗಳ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ.

ಸ್ಥಳದಲ್ಲಿದ್ದ ತ್ಯಾಗಿಯ ಸ್ನೇಹಿತನೊಬ್ಬ ಗಾಡಿಯ ಅರ್ಧ ನಂಬರ್‌ ಮತ್ತು ಕಪ್ಪು ಬಣ್ಣದ ಬೈಕ್‌ ಎಂಬುದನ್ನು ನೆನಪಿಟ್ಟುಕೊಂಡಿದ್ದ. ಅದರ ಆಧಾರದಲ್ಲಿ ಕೊಲೆಗಾರರ ಬೆನ್ನು ಬಿದ್ದ ಪೊಲೀಸರು ನೂರಾರು ಪೈಕ್‌ಗಳನ್ನು ಪರಿಶೀಲಿಸಿ ಅಂತಿಮವಾಗಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರು ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT