ಮರಳು ಅಕ್ರಮ ಗಣಿಗಾರಿಕೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಪುರಾವೆ ಕೊಟ್ಟವರಿಗೆ ₹25,000 ಬಹುಮಾನ ನೀಡಲಾಗುವುದು ಎಂದು ಚನ್ನಿ ಗುರುವಾರವಷ್ಟೇ ಹೇಳಿದ್ದರು. ಅವರು ಈ ಘೋಷಣೆ ಮಾಡಿದ ಮರುದಿನ ಸುದ್ದಿಗೋಷ್ಠಿ ನಡೆಸಿದ ಎಎಪಿ ವಕ್ತಾರ ರಾಘವ್ ಛಡ್ಡಾ ಈ ಸವಾಲು ಎಸೆದಿದ್ದಾರೆ. ಮರಳು ಅಕ್ರಮ ಗಣಿಗಾರಿಕೆಯನ್ನು ತಡೆಯುವುದು ನಿಜವಾದ ಉದ್ದೇಶವಾಗಿದ್ದರೆ ಅದರ ವಿರುದ್ಧ ಕ್ರಮ ಕೈಗೊಳ್ಳಿ ಎಂದಿದ್ದಾರೆ.