ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಪ್ಪು ಮರೆಮಾಚಲು ಕೇಂದ್ರ, ಪ್ರಧಾನಿ ವಿರುದ್ಧ ಕೇಜ್ರಿವಾಲ್ ಆರೋಪ: ಬಿಜೆಪಿ ಟೀಕೆ

Last Updated 21 ಮಾರ್ಚ್ 2023, 9:38 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರು ತಾವು ಮಾಡಿರುವ ತಪ್ಪುಗಳನ್ನು ಮರೆಮಾಚಲು ಮತ್ತು ತಮ್ಮ ಕಳಪೆ ಪ್ರಚಾರಕ್ಕಾಗಿ ಸರ್ಕಾರದ ಬಜೆಟ್‌ನಲ್ಲಿ ಗದ್ದಲವನ್ನು ಸೃಷ್ಟಿಸಿದ್ದಾರೆ ಎಂದು ದೆಹಲಿ ಬಿಜೆಪಿ ಘಟಕ ಆರೋಪಿಸಿದೆ.

ನಗರಾಡಳಿತ ಎದುರಿಸುತ್ತಿರುವ ಭ್ರಷ್ಟಾಚಾರದ ಆರೋಪದಿಂದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೇಜ್ರಿವಾಲ್‌ ಆರೋಪ ಮಾಡುತ್ತಿದ್ದಾರೆ ಎಂದು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್‌ದೇವ್‌ ತಿಳಿಸಿದ್ದಾರೆ.

‘ಬಜೆಟ್ ನಿಲ್ಲಿಸಲು ಕೇಂದ್ರ ಕಾರಣ ಎಂದು ಆರೋಪ ಮಾಡುವ ಬದಲು ಮೂರು ದಿನಗಳಿಂದ ಗೃಹಸಚಿವಾಲಯ ಕೇಳಿರುವ ಮಾಹಿತಿಗೆ ದೆಹಲಿ ಸರ್ಕಾರ ಸ್ಪಷ್ಟೀಕರಣ ನೀಡಲಿ’ ಎಂದು ಸಚ್‌ದೇವ್‌ ಆಗ್ರಹಿಸಿದರು.

ತಮ್ಮ ಸರ್ಕಾರದ ಬಜೆಟ್ ಮಂಡನೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ ಎಂದು ಕೇಜ್ರಿವಾಲ್ ಸೋಮವಾರ ಆರೋಪಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾಗಬೇಕಿದ್ದ ದೆಹಲಿ ಬಜೆಟ್‌ಗೆ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕಿದೆ. 75 ವರ್ಷಗಳಲ್ಲಿ ರಾಜ್ಯವೊಂದರ ಬಜೆಟ್ ಅನ್ನು ನಿಲ್ಲಿಸಿರುವುದು ಇದೇ ಮೊದಲು ಎಂದು ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT