<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಾವು ಮಾಡಿರುವ ತಪ್ಪುಗಳನ್ನು ಮರೆಮಾಚಲು ಮತ್ತು ತಮ್ಮ ಕಳಪೆ ಪ್ರಚಾರಕ್ಕಾಗಿ ಸರ್ಕಾರದ ಬಜೆಟ್ನಲ್ಲಿ ಗದ್ದಲವನ್ನು ಸೃಷ್ಟಿಸಿದ್ದಾರೆ ಎಂದು ದೆಹಲಿ ಬಿಜೆಪಿ ಘಟಕ ಆರೋಪಿಸಿದೆ.</p>.<p>ನಗರಾಡಳಿತ ಎದುರಿಸುತ್ತಿರುವ ಭ್ರಷ್ಟಾಚಾರದ ಆರೋಪದಿಂದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೇಜ್ರಿವಾಲ್ ಆರೋಪ ಮಾಡುತ್ತಿದ್ದಾರೆ ಎಂದು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್ದೇವ್ ತಿಳಿಸಿದ್ದಾರೆ.</p>.<p>‘ಬಜೆಟ್ ನಿಲ್ಲಿಸಲು ಕೇಂದ್ರ ಕಾರಣ ಎಂದು ಆರೋಪ ಮಾಡುವ ಬದಲು ಮೂರು ದಿನಗಳಿಂದ ಗೃಹಸಚಿವಾಲಯ ಕೇಳಿರುವ ಮಾಹಿತಿಗೆ ದೆಹಲಿ ಸರ್ಕಾರ ಸ್ಪಷ್ಟೀಕರಣ ನೀಡಲಿ’ ಎಂದು ಸಚ್ದೇವ್ ಆಗ್ರಹಿಸಿದರು.</p>.<p>ತಮ್ಮ ಸರ್ಕಾರದ ಬಜೆಟ್ ಮಂಡನೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ ಎಂದು ಕೇಜ್ರಿವಾಲ್ ಸೋಮವಾರ ಆರೋಪಿಸಿದ್ದಾರೆ.</p>.<p>ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾಗಬೇಕಿದ್ದ ದೆಹಲಿ ಬಜೆಟ್ಗೆ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕಿದೆ. 75 ವರ್ಷಗಳಲ್ಲಿ ರಾಜ್ಯವೊಂದರ ಬಜೆಟ್ ಅನ್ನು ನಿಲ್ಲಿಸಿರುವುದು ಇದೇ ಮೊದಲು ಎಂದು ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದಾರೆ.</p>.<p>ಇವನ್ನೂ ಓದಿ: <a href="https://cms.prajavani.net/india-news/please-dont-stop-delhi-budget-kejriwal-writes-to-pm-narendra-modi-1025450.html" itemprop="url">ದೆಹಲಿ ಬಜೆಟ್ ನಿಲ್ಲಿಸಬೇಡಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ </a></p>.<p> <a href="https://cms.prajavani.net/india-news/heavy-rain-in-delhi-highest-for-march-in-3-years-rail-and-flitht-hit-1025435.html" itemprop="url">ದೆಹಲಿಯಲ್ಲಿ ಭಾರೀ ಮಳೆ: ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಾವು ಮಾಡಿರುವ ತಪ್ಪುಗಳನ್ನು ಮರೆಮಾಚಲು ಮತ್ತು ತಮ್ಮ ಕಳಪೆ ಪ್ರಚಾರಕ್ಕಾಗಿ ಸರ್ಕಾರದ ಬಜೆಟ್ನಲ್ಲಿ ಗದ್ದಲವನ್ನು ಸೃಷ್ಟಿಸಿದ್ದಾರೆ ಎಂದು ದೆಹಲಿ ಬಿಜೆಪಿ ಘಟಕ ಆರೋಪಿಸಿದೆ.</p>.<p>ನಗರಾಡಳಿತ ಎದುರಿಸುತ್ತಿರುವ ಭ್ರಷ್ಟಾಚಾರದ ಆರೋಪದಿಂದ ಗಮನವನ್ನು ಬೇರೆಡೆ ಸೆಳೆಯಲು ಕೇಂದ್ರ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಕೇಜ್ರಿವಾಲ್ ಆರೋಪ ಮಾಡುತ್ತಿದ್ದಾರೆ ಎಂದು ದೆಹಲಿ ಬಿಜೆಪಿ ಕಾರ್ಯಾಧ್ಯಕ್ಷ ವೀರೇಂದ್ರ ಸಚ್ದೇವ್ ತಿಳಿಸಿದ್ದಾರೆ.</p>.<p>‘ಬಜೆಟ್ ನಿಲ್ಲಿಸಲು ಕೇಂದ್ರ ಕಾರಣ ಎಂದು ಆರೋಪ ಮಾಡುವ ಬದಲು ಮೂರು ದಿನಗಳಿಂದ ಗೃಹಸಚಿವಾಲಯ ಕೇಳಿರುವ ಮಾಹಿತಿಗೆ ದೆಹಲಿ ಸರ್ಕಾರ ಸ್ಪಷ್ಟೀಕರಣ ನೀಡಲಿ’ ಎಂದು ಸಚ್ದೇವ್ ಆಗ್ರಹಿಸಿದರು.</p>.<p>ತಮ್ಮ ಸರ್ಕಾರದ ಬಜೆಟ್ ಮಂಡನೆಯನ್ನು ಕೇಂದ್ರ ಸರ್ಕಾರ ನಿಲ್ಲಿಸಿದೆ ಎಂದು ಕೇಜ್ರಿವಾಲ್ ಸೋಮವಾರ ಆರೋಪಿಸಿದ್ದಾರೆ.</p>.<p>ಮಂಗಳವಾರ ವಿಧಾನಸಭೆಯಲ್ಲಿ ಮಂಡನೆಯಾಗಬೇಕಿದ್ದ ದೆಹಲಿ ಬಜೆಟ್ಗೆ ಕೇಂದ್ರ ಸರ್ಕಾರದಿಂದ ಪೂರ್ವಾನುಮತಿ ಪಡೆಯಬೇಕಿದೆ. 75 ವರ್ಷಗಳಲ್ಲಿ ರಾಜ್ಯವೊಂದರ ಬಜೆಟ್ ಅನ್ನು ನಿಲ್ಲಿಸಿರುವುದು ಇದೇ ಮೊದಲು ಎಂದು ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರಿಗೆ ಪತ್ರವನ್ನು ಬರೆದಿದ್ದಾರೆ.</p>.<p>ಇವನ್ನೂ ಓದಿ: <a href="https://cms.prajavani.net/india-news/please-dont-stop-delhi-budget-kejriwal-writes-to-pm-narendra-modi-1025450.html" itemprop="url">ದೆಹಲಿ ಬಜೆಟ್ ನಿಲ್ಲಿಸಬೇಡಿ: ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪತ್ರ </a></p>.<p> <a href="https://cms.prajavani.net/india-news/heavy-rain-in-delhi-highest-for-march-in-3-years-rail-and-flitht-hit-1025435.html" itemprop="url">ದೆಹಲಿಯಲ್ಲಿ ಭಾರೀ ಮಳೆ: ರೈಲು, ವಿಮಾನ ಸಂಚಾರದಲ್ಲಿ ವ್ಯತ್ಯಯ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>