ಮಹಾರಾಷ್ಟ್ರಕ್ಕೆ ವೀಕ್ಷಕರಾಗಿ ನೇಮಕವಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಕಮಲನಾಥ್, ದೂರವಾಣಿ ಮೂಲಕ ಠಾಕ್ರೆ ಜೊತೆ ಚರ್ಚೆ ನಡೆಸಿದ್ದಾರೆ. ಮಹಾ ವಿಕಾಸ್ ಅಘಾಡಿ ನೇತೃತ್ವದ ಸರ್ಕಾರವು ಸದ್ಯದ ರಾಜಕೀಯ ಪರಿಸ್ಥಿತಿಯಿಂದ ಯಶಸ್ವಿಯಾಗಿ ಹೊರಬರಲಿದೆ. ರಾಜ್ಯ ವಿಧಾನಸಭೆ ವಿಸರ್ಜಿಸುವ ಯಾವುದೇ ಪ್ರಶ್ನೆ ಇಲ್ಲ ಎಂದು ಪಟೊಲೆ ಹೇಳಿದ್ದಾರೆ.