ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ಬರುವ ತೊಪ್ಪೂರು–ಸಿವಾಡಿ ಮಧ್ಯೆ ಬಂಡೆಗಳು ಉರುಳಿಬಿದ್ದ ಪರಿಣಾಮ ರೈಲು ಹಳಿ ತಪ್ಪಿದೆ. ಮುಂಜಾನೆ 3.50ರ ಸುಮಾರಿಗೆ ರೈಲುಸಂಚರಿಸುತ್ತಿದ್ದಾಗಲೇ ರೈಲಿನ ಮೇಲೆ ಬಂಡೆಗಳು ಉರುಳಿದ್ದು, ರೈಲುಹಳಿ ತಪ್ಪಿದೆ.ಎಲ್ಲ 2,348 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ನೈಋತ್ಯ ರೈಲ್ವೆ ಹೇಳಿಕೆ ಉಲ್ಲೇಖಿಸಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.