‘ದಿಲೀಪ್ ರೇ ಜೊತೆಗೆ ಆಗ ಕಲ್ಲಿದ್ದಲು ಸಚಿವಾಲಯದ ಹಿರಿಯ ಅಧಿಕಾರಿಗಳಾಗಿದ್ದ ಪ್ರದೀಪ್ ಕುಮಾರ್ ಬ್ಯಾನರ್ಜಿ ಮತ್ತು ನಿತ್ಯಾನಂದ ಗೌತಮ್ ಹಾಗೂ ಕ್ಯಾಸ್ಟ್ರೊನ್ ಟೆಕ್ನಾಲಜೀಸ್ ಲಿಮಿಟೆಡ್ನ (ಸಿಟಿಎಲ್) ನಿರ್ದೇಶಕ ಮಹೇಂದ್ರ ಕುಮಾರ್ ಅಗರವಾಲ್ ಅವರಿಗೂ ತಲಾ ಮೂರು ವರ್ಷ ಸೆರೆವಾಸ ವಿಧಿಸಲಾಗಿದೆ. ಇವರೆಲ್ಲರೂ ತಲಾ ₹10 ಲಕ್ಷ ದಂಡವನ್ನೂ ಕಟ್ಟಬೇಕು’ ಎಂದು ವಿಶೇಷ ನ್ಯಾಯಾಧೀಶ ಭಾರತ್ ಪರಾಶರ್ ಅವರು ಸೋಮವಾರ ತಿಳಿಸಿದ್ದಾರೆ.