ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾವುತ್, ‘ನಮ್ಮ ಇಲಾಖೆಯು ಸೂಕ್ಷ್ಮ ಹಂತದ ಯೋಜನೆಯೊಂದಿಗೆ ವಿದ್ಯುತ್ ಕೊರತೆಯನ್ನು ತಗ್ಗಿಸಲು ಕೆಲಸ ಮಾಡುತ್ತಿದೆ. ಕಳೆದ ಐದಾರು ದಿನಗಳಿಂದ ಸೂಕ್ಷ ಹಂತದ ಯೋಜನೆಯಿಂದಾಗಿ ಮಹಾರಾಷ್ಟ್ರದಲ್ಲಿ ವಿದ್ಯುತ್ ನಿಲುಗಡೆ ಕಂಡುಬಂದಿಲ್ಲ. ರಾಜ್ಯದಲ್ಲಿ ಕೇವಲ ಶೇಕಡ 15ರಷ್ಟು ವಿದ್ಯುತ್ ಕೊರತೆ ಉಂಟಾಗಿದೆ’ ಎಂದು ತಿಳಿಸಿದರು.