ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತದಾನಕ್ಕೂ ಮುನ್ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

Last Updated 28 ಫೆಬ್ರುವರಿ 2022, 22:00 IST
ಅಕ್ಷರ ಗಾತ್ರ

ಇಂಫಾಲ್‌ (ಪಿಟಿಐ): ಮಣಿಪುರ ವಿಧಾನಸಭೆ ಚುನಾವಣೆಗೆ ಕೆಲವೇ ಗಂಟೆಗಳು ಬಾಕಿ ಇರುವಂತೆ ಕಾಂಗ್ರೆಸ್‌ ತನ್ನ ಒಬ್ಬ ಅಭ್ಯರ್ಥಿಯನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಿದೆ.

ವಾಂಗೋಯಿ ಎಸಿ ಕ್ಷೇತ್ರದ ಅಭ್ಯರ್ಥಿ ಸಲಾಂ ಜಾಯ್‌ ಸಿಂಗ್‌ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಆದೇಶ ಹೊರಡಿಸಲಾಗಿದೆ.ಸಲಾಂ ಅವರು ಪಕ್ಷದ ಶಿಸ್ತು ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ತಿಳಿದು ಬಂದಿರುವ ಕಾರಣಅವರ ವಿರುದ್ಧ ಶಿಸ್ತು ಕ್ರಮ ಕೈಗೊಂಡಿರುವುದಾಗಿ ಆದೇಶದಲ್ಲಿ ಹೇಳಲಾಗಿದೆ.

ಜೆಡಿಯು ಅಭ್ಯರ್ಥಿ ಮೇಲೆ ಗುಂಡಿನ ದಾಳಿ: ಖೆತ್ರಿಗಾವೊ ಕ್ಷೇತ್ರದ ಜನತಾ ದಳ (ಯು) ಅಭ್ಯರ್ಥಿ ವಹೆಂಗ್‌ಬಂ ರೋಜಿತ್‌ ಸಿಂಗ್ (42) ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ಶನಿ ವಾರ ರಾತ್ರಿ ಗುಂಡು ಹಾರಿಸಿದ್ದಾರೆ. ಇಂಫಾಲ್‌ನ ನಹಾರುಪ್‌ ಮಖಾಪತ್‌ ಪ್ರದೇಶದಲ್ಲಿ ಶನಿವಾರ ರಾತ್ರಿ ಸುಮಾರು 11.30ಕ್ಕೆ ಮತಗಟ್ಟೆಗಳನ್ನು ಅವರು ಪರಿಶೀಲಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರೋಜಿತ್‌ ಸಿಂಗ್ ಸ್ಥಿತಿ ಗಂಭೀರವಾಗಿದೆ. ಆದರೆ ಪ್ರಾಣಾಪಾಯವಿಲ್ಲ ಎಂದು ಅಲ್ಲಿಯ ಸ್ಥಳೀಯ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT