<p><strong>ನವದೆಹಲಿ (ಪಿಟಿಐ):</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಮುಂದುವರಿದಿದೆ. ನಗರದ ಅನೇಕ ಭಾಗಗಳಲ್ಲಿ ಕವಿದಿದ್ದ ದಟ್ಟ ಮಂಜು ಕ್ರಮೇಣ ಕಡಿಮೆಯಾಗುತ್ತಿದೆ.</p>.<p>ಭಾನುವಾರ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡು ಬಂದಿದೆ. ಸೋಮವಾರವೂ ತಾಪಮಾನದಲ್ಲಿ ಹೆಚ್ಚಳ ಕಾಣಬಹುದು. ಡಿ. 29ರ ನಂತರ ಮತ್ತೆ ಶೀತ ಮಾರುತಗಳು ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದರು.</p>.<p>ಸಫ್ದರ್ಜಂಗ್ ವೀಕ್ಷಣಾಲಯದ ಮಾಹಿತಿ ಪ್ರಕಾರ, ಶನಿವಾರ 5 ಡಿಗ್ರಿ ಸೆಲ್ಸಿಯಸ್ಗಿಂತಲೂ ಕಡಿಮೆ ತಾಪಮಾನ ದಾಖಲಾಗಿತ್ತು. ಕಳೆದ ನಾಲ್ಕು ದಿನಗಳಿಂದಲೂ ಇದೇ ಪರಿಸ್ಥಿತಿ ಇತ್ತು ಎಂದು ಅವರು ತಿಳಿಸಿದರು.</p>.<p>ನಗರದಲ್ಲಿ ಕವಿದಿದ್ದ ಮಂಜು ಕ್ರಮೇಣ ಕರಗುತ್ತಿದೆ. ಕೆಲ ದಿನಗಳ ಹಿಂದೆ 100 ಮೀ. ದೂರದಲ್ಲಿದ್ದ ವ್ಯಕ್ತಿ, ವಸ್ತು ಕಾರಣದಷ್ಟು ಮಂಜು ಕವಿದಿತ್ತು. ಈಗ ಆ ಪರಿಸ್ಥಿತಿ ಇಲ್ಲ. ಸಫ್ದರ್ಜಂಗ್ ರಸ್ತೆಯಲ್ಲಿ 1000 ಮೀ. ದೂರದ ವರೆಗೆ ವೀಕ್ಷಿಸಲು ಸಾಧ್ಯವಾಗುತ್ತಿದ್ದರೆ, ಪಾಲಂ ಪ್ರದೇಶದಲ್ಲಿ 800 ಮೀ. ದೂರದ ವರೆಗೆ ನೋಡಲು ಸಾಧ್ಯವಾಗುತ್ತಿದೆ. ಅಷ್ಟರ ಮಟ್ಟಿಗೆ ಮಂಜು ಕರಗಿದೆ ಎಂದು ಶ್ರೀವಾಸ್ತವ ಹೇಳಿದರು.</p>.<p>ವಾತಾವರಣದಲ್ಲಿ ತೇವಾಂಶದ ಪ್ರಮಾಣ ಹೆಚ್ಚುತ್ತಿರುವ ಕಾರಣ ಸೋಮವಾರದಿಂದ ದೆಹಲಿಯ ವಾಯುವಿನ ಗುಣಮಟ್ಟ ಮತ್ತೆ ಕುಸಿಯಲಿದೆ. ಗಾಳಿಯ ವೇಗ ಹಾಗೂ ತಾಪಮಾನದಲ್ಲಿನ ಇಳಿಕೆಯೂ ಈ ವಿದ್ಯಮಾನಕ್ಕೆ ಕಾರಣವಾಗಲಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಚಳಿ ಮುಂದುವರಿದಿದೆ. ನಗರದ ಅನೇಕ ಭಾಗಗಳಲ್ಲಿ ಕವಿದಿದ್ದ ದಟ್ಟ ಮಂಜು ಕ್ರಮೇಣ ಕಡಿಮೆಯಾಗುತ್ತಿದೆ.</p>.<p>ಭಾನುವಾರ ತಾಪಮಾನದಲ್ಲಿ ಸ್ವಲ್ಪ ಏರಿಕೆ ಕಂಡು ಬಂದಿದೆ. ಸೋಮವಾರವೂ ತಾಪಮಾನದಲ್ಲಿ ಹೆಚ್ಚಳ ಕಾಣಬಹುದು. ಡಿ. 29ರ ನಂತರ ಮತ್ತೆ ಶೀತ ಮಾರುತಗಳು ಬೀಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಪ್ರಾದೇಶಿಕ ಕೇಂದ್ರದ ಮುಖ್ಯಸ್ಥ ಕುಲದೀಪ್ ಶ್ರೀವಾಸ್ತವ ಹೇಳಿದರು.</p>.<p>ಸಫ್ದರ್ಜಂಗ್ ವೀಕ್ಷಣಾಲಯದ ಮಾಹಿತಿ ಪ್ರಕಾರ, ಶನಿವಾರ 5 ಡಿಗ್ರಿ ಸೆಲ್ಸಿಯಸ್ಗಿಂತಲೂ ಕಡಿಮೆ ತಾಪಮಾನ ದಾಖಲಾಗಿತ್ತು. ಕಳೆದ ನಾಲ್ಕು ದಿನಗಳಿಂದಲೂ ಇದೇ ಪರಿಸ್ಥಿತಿ ಇತ್ತು ಎಂದು ಅವರು ತಿಳಿಸಿದರು.</p>.<p>ನಗರದಲ್ಲಿ ಕವಿದಿದ್ದ ಮಂಜು ಕ್ರಮೇಣ ಕರಗುತ್ತಿದೆ. ಕೆಲ ದಿನಗಳ ಹಿಂದೆ 100 ಮೀ. ದೂರದಲ್ಲಿದ್ದ ವ್ಯಕ್ತಿ, ವಸ್ತು ಕಾರಣದಷ್ಟು ಮಂಜು ಕವಿದಿತ್ತು. ಈಗ ಆ ಪರಿಸ್ಥಿತಿ ಇಲ್ಲ. ಸಫ್ದರ್ಜಂಗ್ ರಸ್ತೆಯಲ್ಲಿ 1000 ಮೀ. ದೂರದ ವರೆಗೆ ವೀಕ್ಷಿಸಲು ಸಾಧ್ಯವಾಗುತ್ತಿದ್ದರೆ, ಪಾಲಂ ಪ್ರದೇಶದಲ್ಲಿ 800 ಮೀ. ದೂರದ ವರೆಗೆ ನೋಡಲು ಸಾಧ್ಯವಾಗುತ್ತಿದೆ. ಅಷ್ಟರ ಮಟ್ಟಿಗೆ ಮಂಜು ಕರಗಿದೆ ಎಂದು ಶ್ರೀವಾಸ್ತವ ಹೇಳಿದರು.</p>.<p>ವಾತಾವರಣದಲ್ಲಿ ತೇವಾಂಶದ ಪ್ರಮಾಣ ಹೆಚ್ಚುತ್ತಿರುವ ಕಾರಣ ಸೋಮವಾರದಿಂದ ದೆಹಲಿಯ ವಾಯುವಿನ ಗುಣಮಟ್ಟ ಮತ್ತೆ ಕುಸಿಯಲಿದೆ. ಗಾಳಿಯ ವೇಗ ಹಾಗೂ ತಾಪಮಾನದಲ್ಲಿನ ಇಳಿಕೆಯೂ ಈ ವಿದ್ಯಮಾನಕ್ಕೆ ಕಾರಣವಾಗಲಿದೆ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>