2016ರಲ್ಲಿ ನವದೆಹಲಿಯ ಪ್ರೆಸ್ಕ್ಲಬ್ನಲ್ಲಿ ನಡೆದ ‘ಆಜಾದಿ’ –ದಿ ಓನ್ಲಿ ವೇ’ ಸಮಾವೇಶದಲ್ಲಿ ಪ್ರತ್ಯೇಕತಾವಾದಿ ಸಯ್ಯದ್ ಅಲಿ ಶಾ ಗಿಲಾನಿ, ಲೇಖಕಿ ಅರುಂಧತಿ ರಾಯ್ ಹಾಗೂ ಇತರರೊಂದಿಗೆ ಪಾಲ್ಗೊಂಡಿದ್ದ ಪ್ರೊ.ಹುಸೇನ್ ಅವರ ವಿರುದ್ಧ ಭಾರತ ವಿರೋಧಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಐಪಿಸಿ 124 ಎ (ದೇಶದ್ರೋಹ), 120 ಬಿ (ಅಪರಾಧ ಪಿತೂರಿ) ,149 ( ಕಾನೂನುಬಾಹಿರ ಸಭೆ) ಪ್ರಕರಣ ದಾಖಲಿಸಿದ್ದರು.