ಗಾಲ್ವಾನ್ ಘರ್ಷಣೆ: ಹುತಾತ್ಮ ಕರ್ನಲ್ ಸಂತೋಷ್ ಬಾಬುಗೆ 'ಮಹಾವೀರ ಚಕ್ರ'

ನವದೆಹಲಿ: ಭಾರತ ಮತ್ತು ಚೀನಾ ಸೇನೆಯ ನಡುವೆ ನಡೆದ ಗಾಲ್ವಾನ್ ಘರ್ಷಣೆಯಲ್ಲಿ ಸಾವಿಗೀಡಾದ ಕರ್ನಲ್ ಸಂತೋಷ್ ಬಾಬು ಅವರಿಗೆ ಮರಣೋತ್ತರ 'ಮಹಾವೀರ ಚಕ್ರ' ಘೋಷಣೆಯಾಗಿದೆ.
ಕಳೆದ ವರ್ಷ ಜೂನ್ನಲ್ಲಿ ಲಡಾಖ್ನ ಪೂರ್ವಭಾಗದ ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಬಾಬು ಹುತಾತ್ಮರಾದರು.
2004ರಲ್ಲಿ ಸೇನೆಗೆ ಸೇರಿದ್ದ ಬಾಬು, ಜಮ್ಮು ಮತ್ತು ಕಾಶ್ಮೀರದಲ್ಲಿ ವೃತ್ತಿ ಆರಂಭಿಸಿದ್ದರು. ಅವರು ತೆಲಂಗಾಣದ ಸೂರ್ಯಪೇಟೆಯವರು. ಬಿಹಾರದ–16 ರೆಜಿಮೆಂಟ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಬು ಅವರು ಪತ್ನಿ, ಮಗಳು ಮತ್ತು ಮಗನನ್ನು ಅಗಲಿದ್ದಾರೆ.
Colonel Santosh Babu (in file pic) who lost his life in Galwan valley clash, has been awarded Mahavir Chakra posthumously. #RepublicDay pic.twitter.com/SLJ0y5w2bQ
— ANI (@ANI) January 25, 2021
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.