ಹಿಂದಿಯಲ್ಲಿ ಟ್ವೀಟ್ ಮಾಡಿರುವ ಅವರು, 'ಉತ್ತರ ಪ್ರದೇಶದಲ್ಲಿ ತಾಯಂದಿರು ಮತ್ತು ಹೆಣ್ಣುಮಕ್ಕಳಿಗೆ ಹಾನಿ ಮಾಡುವ ಬಗ್ಗೆ ಯೋಚಿಸುವವರ ವಿನಾಶ ಖಚಿತವಾಗಿದೆ. ಭವಿಷ್ಯದಲ್ಲಿ ನಿದರ್ಶನ ಆಗಲಿರುವಂತಹಶಿಕ್ಷೆಯನ್ನು ಅವರು ಅನುಭವಿಸುತ್ತಾರೆ. ಎಲ್ಲಾ ತಾಯಂದಿರು ಮತ್ತು ಸಹೋದರಿಯರ ಸುರಕ್ಷತೆಗೆ ಹಾಗೂ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇದು ನಾನು ನೀಡುತ್ತಿರುವ ಭರವಸೆ' ಎಂದು ಆದಿತ್ಯನಾಥ್ ತಿಳಿಸಿದ್ದಾರೆ.