<p class="title"><strong>ನವದೆಹಲಿ (ಪಿಟಿಐ): </strong>ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಪರಿಣಾಮಕಾರಿ ಮತ್ತು ಪಾರದರ್ಶಕಗೊಳಿಸುವ ಸಂಬಂಧ ರಚಿಸಲಾಗಿರುವ ಸಮಿತಿ, ಸೋಮವಾರ ತನ್ನ ಪ್ರಥಮ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿತು. ಈ ಸಭೆಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಗೈರು ಹಾಜರಾಗಿತ್ತು.</p>.<p class="title">ಕೃಷಿ ಇಲಾಖೆಯ ಮಾಜಿ ಕಾರ್ಯದರ್ಶಿ ಸಂಜಯ್ ಅಗರವಾಲ್ ನೇತೃತ್ವದ ಸಮಿತಿಯು ‘ಶೂನ್ಯ ಬಂಡವಾಳ ಆಧರಿತ ಕೃಷಿ ಪದ್ಧತಿ’ಯನ್ನು ಉತ್ತೇಜಿಸುವ, ದೇಶದ ಅಗತ್ಯ ಆಧರಿಸಿ ಬೆಳೆ ಪದ್ಧತಿ ಬದಲಿಸುವ ಹಾಗೂ ಎಂಎಸ್ಪಿ ಅನ್ನು ಪರಿಣಾಮಕಾರಿಗೊಳಿಸುವ ಕುರಿತಂತೆ ಚರ್ಚಿಸಿತು.</p>.<p class="title">ಸಮಿತಿಯಲ್ಲಿ ಅಧ್ಯಕ್ಷ ಸೇರಿ 26 ಸದಸ್ಯರಿದ್ದಾರೆ. ಎಸ್ಕೆಎಂ ಪ್ರತಿನಿಧಿಸುವವರಿಗಾಗಿ ಮೂರು ಸ್ಥಾನ ಕಾಯ್ದಿಡಲಾಗಿದೆ. ಸಮಿತಿಯು ಚರ್ಚಿಸಿ, ವರದಿ ನೀಡಬೇಕಾದ ಮೂರು ಅಂಶಗಳ ಕುರಿತು ಸಭೆಯಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು ಎಂದು ಸಮಿತಿ ಸದಸ್ಯ ವಿನೋದ್ ಆನಂದ್ ತಿಳಿಸಿದರು.</p>.<p>ಕೃಷಿ ವಿಶ್ವವಿದ್ಯಾಲಯಗಳ ಹಿರಿಯ ಸದಸ್ಯರು, ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು, ಕರ್ನಾಟಕ, ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ರಾಷ್ಟ್ರಪ್ರಶಸ್ತಿ ಪುರಸ್ಕೃತ ಭರತ್ ಭೂಷಣ್ ತ್ಯಾಗಿ, ಗುಣವಂತ್ ಪಾಟೀಲ್, ಕೃಷ್ಣವೀರ್ ಚೌಧರಿ, ಪ್ರಮೋದ್ ಕುಮಾರ್ ಚೌಧರಿ, ಗುಣಿ ಪ್ರಕಾಶ್ ಮತ್ತಿತರರು ರೈತರ ಪ್ರತಿನಿಧಿಗಳಾಗಿ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ (ಪಿಟಿಐ): </strong>ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್ಪಿ) ಪರಿಣಾಮಕಾರಿ ಮತ್ತು ಪಾರದರ್ಶಕಗೊಳಿಸುವ ಸಂಬಂಧ ರಚಿಸಲಾಗಿರುವ ಸಮಿತಿ, ಸೋಮವಾರ ತನ್ನ ಪ್ರಥಮ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಿತು. ಈ ಸಭೆಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಗೈರು ಹಾಜರಾಗಿತ್ತು.</p>.<p class="title">ಕೃಷಿ ಇಲಾಖೆಯ ಮಾಜಿ ಕಾರ್ಯದರ್ಶಿ ಸಂಜಯ್ ಅಗರವಾಲ್ ನೇತೃತ್ವದ ಸಮಿತಿಯು ‘ಶೂನ್ಯ ಬಂಡವಾಳ ಆಧರಿತ ಕೃಷಿ ಪದ್ಧತಿ’ಯನ್ನು ಉತ್ತೇಜಿಸುವ, ದೇಶದ ಅಗತ್ಯ ಆಧರಿಸಿ ಬೆಳೆ ಪದ್ಧತಿ ಬದಲಿಸುವ ಹಾಗೂ ಎಂಎಸ್ಪಿ ಅನ್ನು ಪರಿಣಾಮಕಾರಿಗೊಳಿಸುವ ಕುರಿತಂತೆ ಚರ್ಚಿಸಿತು.</p>.<p class="title">ಸಮಿತಿಯಲ್ಲಿ ಅಧ್ಯಕ್ಷ ಸೇರಿ 26 ಸದಸ್ಯರಿದ್ದಾರೆ. ಎಸ್ಕೆಎಂ ಪ್ರತಿನಿಧಿಸುವವರಿಗಾಗಿ ಮೂರು ಸ್ಥಾನ ಕಾಯ್ದಿಡಲಾಗಿದೆ. ಸಮಿತಿಯು ಚರ್ಚಿಸಿ, ವರದಿ ನೀಡಬೇಕಾದ ಮೂರು ಅಂಶಗಳ ಕುರಿತು ಸಭೆಯಲ್ಲಿ ಪ್ರಾತ್ಯಕ್ಷಿಕೆ ನೀಡಲಾಯಿತು ಎಂದು ಸಮಿತಿ ಸದಸ್ಯ ವಿನೋದ್ ಆನಂದ್ ತಿಳಿಸಿದರು.</p>.<p>ಕೃಷಿ ವಿಶ್ವವಿದ್ಯಾಲಯಗಳ ಹಿರಿಯ ಸದಸ್ಯರು, ಕೇಂದ್ರ ಸರ್ಕಾರದ ಕಾರ್ಯದರ್ಶಿಗಳು, ಕರ್ನಾಟಕ, ಆಂಧ್ರಪ್ರದೇಶ, ಸಿಕ್ಕಿಂ, ಒಡಿಶಾ ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p>ರಾಷ್ಟ್ರಪ್ರಶಸ್ತಿ ಪುರಸ್ಕೃತ ಭರತ್ ಭೂಷಣ್ ತ್ಯಾಗಿ, ಗುಣವಂತ್ ಪಾಟೀಲ್, ಕೃಷ್ಣವೀರ್ ಚೌಧರಿ, ಪ್ರಮೋದ್ ಕುಮಾರ್ ಚೌಧರಿ, ಗುಣಿ ಪ್ರಕಾಶ್ ಮತ್ತಿತರರು ರೈತರ ಪ್ರತಿನಿಧಿಗಳಾಗಿ ಸಭೆಯಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>