<p><strong>ವಡೋದರ:</strong> ‘ಧಾರ್ಮಿಕ ಧ್ವಜ ಕಟ್ಟುವ ವಿಚಾರವಾಗಿ ಗುಜರಾತ್ನ ವಡೋದರ ಜಿಲ್ಲೆಯ ಸಾವ್ಲಿ ನಗರದ ಧಾಮಿಜಿ ಕಾ ಡೇರಾ ಪ್ರದೇಶದಲ್ಲಿ ಎರಡು ಸಮುದಾಯಗಳ ಜನರ ನಡುವೆ ಘರ್ಷಣೆ ನಡೆದಿದ್ದು, ಈ ಸಂಬಂಧ 36 ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.</p>.<p>‘ಸಮುದಾಯವೊಂದಕ್ಕೆ ಸೇರಿದ ಜನ ವಿದ್ಯುತ್ ಕಂಬಕ್ಕೆ ಧ್ವಜ ಕಟ್ಟಿದ್ದರು. ಅದರ ಪಕ್ಕದಲ್ಲೇ ಮತ್ತೊಂದು ಸಮುದಾಯಕ್ಕೆ ಸೇರಿದ ಗುಂಪು ಧ್ವಜ ಕಟ್ಟಲು ಮುಂದಾಗಿತ್ತು. ಈ ವಿಚಾರವಾಗಿ ಉಭಯ ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಎರಡೂ ಸಮುದಾಯದವರು ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ವಾಹನ ಮತ್ತು ಅಂಗಡಿಯೊಂದಕ್ಕೆ ಹಾನಿಯಾಗಿದೆ’ ಎಂದು ಸಬ್ ಇನ್ಸ್ಪೆಕ್ಟರ್ ಎ.ಆರ್.ಮಹಿದಾ ಮಾಹಿತಿ ನೀಡಿದ್ದಾರೆ.</p>.<p>‘ಶನಿವಾರ ರಾತ್ರಿ ಉಭಯ ಗುಂಪುಗಳು ದೂರು ದಾಖಲಿಸಿದ್ದವು. ಅದರ ಆಧಾರದಲ್ಲಿ 43 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಈವರೆಗೆ ಉಭಯ ಸಮುದಾಯಕ್ಕೆ ಸೇರಿದ ಒಟ್ಟು 36 ಮಂದಿಯನ್ನು ಬಂಧಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರಿಸ್ಥಿತಿ ಈಗ ತಹಬದಿಗೆ ಬಂದಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಡೋದರ:</strong> ‘ಧಾರ್ಮಿಕ ಧ್ವಜ ಕಟ್ಟುವ ವಿಚಾರವಾಗಿ ಗುಜರಾತ್ನ ವಡೋದರ ಜಿಲ್ಲೆಯ ಸಾವ್ಲಿ ನಗರದ ಧಾಮಿಜಿ ಕಾ ಡೇರಾ ಪ್ರದೇಶದಲ್ಲಿ ಎರಡು ಸಮುದಾಯಗಳ ಜನರ ನಡುವೆ ಘರ್ಷಣೆ ನಡೆದಿದ್ದು, ಈ ಸಂಬಂಧ 36 ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಸೋಮವಾರ ಹೇಳಿದ್ದಾರೆ.</p>.<p>‘ಸಮುದಾಯವೊಂದಕ್ಕೆ ಸೇರಿದ ಜನ ವಿದ್ಯುತ್ ಕಂಬಕ್ಕೆ ಧ್ವಜ ಕಟ್ಟಿದ್ದರು. ಅದರ ಪಕ್ಕದಲ್ಲೇ ಮತ್ತೊಂದು ಸಮುದಾಯಕ್ಕೆ ಸೇರಿದ ಗುಂಪು ಧ್ವಜ ಕಟ್ಟಲು ಮುಂದಾಗಿತ್ತು. ಈ ವಿಚಾರವಾಗಿ ಉಭಯ ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ಬಳಿಕ ಎರಡೂ ಸಮುದಾಯದವರು ಪರಸ್ಪರ ಕಲ್ಲು ತೂರಾಟ ನಡೆಸಿದ್ದರು. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಆದರೆ ವಾಹನ ಮತ್ತು ಅಂಗಡಿಯೊಂದಕ್ಕೆ ಹಾನಿಯಾಗಿದೆ’ ಎಂದು ಸಬ್ ಇನ್ಸ್ಪೆಕ್ಟರ್ ಎ.ಆರ್.ಮಹಿದಾ ಮಾಹಿತಿ ನೀಡಿದ್ದಾರೆ.</p>.<p>‘ಶನಿವಾರ ರಾತ್ರಿ ಉಭಯ ಗುಂಪುಗಳು ದೂರು ದಾಖಲಿಸಿದ್ದವು. ಅದರ ಆಧಾರದಲ್ಲಿ 43 ಮಂದಿ ವಿರುದ್ಧ ಪ್ರಕರಣ ದಾಖಲಿಸಿದ್ದು, ಈವರೆಗೆ ಉಭಯ ಸಮುದಾಯಕ್ಕೆ ಸೇರಿದ ಒಟ್ಟು 36 ಮಂದಿಯನ್ನು ಬಂಧಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಪರಿಸ್ಥಿತಿ ಈಗ ತಹಬದಿಗೆ ಬಂದಿದೆ’ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>