ಸ್ಥಳೀಯ ಮಾಧ್ಯಮವನ್ನು ಉದ್ದೇಶಿಸಿ ಮಾತನಾಡಿರುವ ವಡೋದರಾ ಉಪ ಪೊಲೀಸ್ ಆಯುಕ್ತ ಯಶ್ಪಾಲ್ ಜಗನಿಯ ‘ಹಿಂಸಾಚಾರಕ್ಕೆ ನಿಖರವಾದ ಕಾರಣ ಇನ್ನೂ ಗೊತ್ತಾಗಿಲ್ಲ. ಘಟನೆಯ ಬಗ್ಗೆ ತಿಳಿದುಬಂದ ಕ್ಷಣವೇ ನಗರದಾದ್ಯಂತ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ. ಮನೆಯ ಮಹಡಿಯಿಂದ ಪೊಲೀಸರ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದ್ದು, ಈ ಸಂಬಂಧ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ’ ಎಂದು ತಿಳಿಸಿದ್ದಾರೆ.