ಕೋವಿಡ್-19 ಲಸಿಕೆಯ ರಾಷ್ಟ್ರೀಯ ತಜ್ಞರ ಗುಂಪಿನ ಅಧ್ಯಕ್ಷರಾಗಿರುವ ಪಾಲ್ ಅವರು, ‘ಭಾರತದ ಸ್ಥಿತಿ ಉತ್ತಮವಾಗಿದೆ. ಕೇರಳ, ಕರ್ನಾಟಕ, ರಾಜಸ್ಥಾನ, ಛತ್ತೀಸಗಡ ಮತ್ತು ಪಶ್ಚಿಮ ಬಂಗಾಳ ಹಾಗೂ 3-4 ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರ ಕೋವಿಡ್ ಸೋಂಕು ಹರಡುವಿಕೆ ಏರಿಕೆಯಲ್ಲಿದೆ. ಆದರೆ, ದೇಶದ ಶೇ 90ರಷ್ಟು ಜನರು ಸೋಂಕಿನ ಸಂಪರ್ಕಕ್ಕೆ ಬರುವ ಸಾಧ್ಯತೆ ಇರುವುದರಿಂದ ಮಾಡಬೇಕಾದ ಕೆಲಸಗಳು ಸಾಕಷ್ಟು ಇವೆ’ ಎಂದು ಎಚ್ಚರಿಕೆ ನೀಡಿದ್ದಾರೆ.