<p class="title"><strong>ನವದೆಹಲಿ: </strong>ದೇಶದಲ್ಲಿ ರಾಜ್ಯಪಾಲರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚು ನಿಷ್ಠೆ ತೋರಿಸಲು ಪರಸ್ಪರ ಪೈಪೋಟಿಗೆ ಇಳಿದಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದರು.</p>.<p class="bodytext">ಬಜೆಟ್ ಅಧಿವೇಶನದಲ್ಲಿ ಅದಾನಿ ವಿಷಯ, ಗಡಿಯಲ್ಲಿ ಚೀನಾ ಅತಿಕ್ರಮಣ, ಹೆಚ್ಚಿದ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಹಾಗೂ ರಾಜ್ಯಪಾಲರ ಪಾತ್ರದ ಬಗ್ಗೆ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸಂಘಟಿತ ಧ್ವನಿ ಎತ್ತಲಿವೆ ಎಂದು ಅವರು ಹೇಳಿದರು.</p>.<p>ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನುಸರಿಸಿರುವ ಕ್ರಮಗಳಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಖರ್ಗೆ, ರಾಜ್ಯಪಾಲರ ಪಾತ್ರ ಮತ್ತು ವಿರೋಧ ಪಕ್ಷಗಳ ಸರ್ಕಾರಗಳು ಇರುವ ರಾಜ್ಯಗಳಲ್ಲಿ ರಾಜ್ಯಪಾಲರು ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ಕೋರಲಾಗಿದೆ ಎಂದರು.</p>.<p>ಅಮೆರಿಕದ ಹಿಂಡೆನ್ಬರ್ಗ್ ಸಂಸ್ಥೆಯು ಹೊರಗೆಡವಿದ ಸಂಶೋಧನಾ ವರದಿಯಿಂದ ಷೇರುಪೇಟೆಯಲ್ಲಿ ನೆಲಕಚ್ಚಿರುವ ಅದಾನಿ ಸಮೂಹದ ಆರ್ಥಿಕ ಅಕ್ರಮಗಳ ಬಗ್ಗೆಯೂ ಅಧಿವೇಶನದಲ್ಲಿ ಪ್ರಶ್ನಿಸಲಾಗುವುದು ಎಂದರು.</p>.<p>ಸುಮಾರು 30 ಕೋಟಿ ಜನರು ತಮ್ಮ ಭವಿಷ್ಯದ ಭದ್ರತೆಗೆ ಎಲ್ಐಸಿ ವಿಮೆಯಲ್ಲಿ ಹೂಡಿಕೆ ಮಾಡಿದ್ದಾರೆ. ಆದರೆ, ಈಗ ಅವರು ತಮ್ಮ ಉಳಿತಾಯ ಹಣ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ. ಈ ಬಗ್ಗೆಯೂ ಧ್ವನಿ ಎತ್ತಲು ವಿಪಕ್ಷಗಳು ಜಂಟಿ ಕಾರ್ಯತಂತ್ರ ರೂಪಿಸಿವೆ ಎಂದು ಖರ್ಗೆ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ: </strong>ದೇಶದಲ್ಲಿ ರಾಜ್ಯಪಾಲರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹೆಚ್ಚು ನಿಷ್ಠೆ ತೋರಿಸಲು ಪರಸ್ಪರ ಪೈಪೋಟಿಗೆ ಇಳಿದಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಆರೋಪಿಸಿದರು.</p>.<p class="bodytext">ಬಜೆಟ್ ಅಧಿವೇಶನದಲ್ಲಿ ಅದಾನಿ ವಿಷಯ, ಗಡಿಯಲ್ಲಿ ಚೀನಾ ಅತಿಕ್ರಮಣ, ಹೆಚ್ಚಿದ ಹಣದುಬ್ಬರ, ನಿರುದ್ಯೋಗ ಸಮಸ್ಯೆ ಹಾಗೂ ರಾಜ್ಯಪಾಲರ ಪಾತ್ರದ ಬಗ್ಗೆ ಬಜೆಟ್ ಅಧಿವೇಶನದಲ್ಲಿ ವಿರೋಧ ಪಕ್ಷಗಳು ಸಂಘಟಿತ ಧ್ವನಿ ಎತ್ತಲಿವೆ ಎಂದು ಅವರು ಹೇಳಿದರು.</p>.<p>ತೆಲಂಗಾಣ, ತಮಿಳುನಾಡು, ಮಹಾರಾಷ್ಟ್ರ ರಾಜ್ಯಗಳಲ್ಲಿ ರಾಜ್ಯಪಾಲರು ಮತ್ತು ದೆಹಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅನುಸರಿಸಿರುವ ಕ್ರಮಗಳಿಗೆ ಆಕ್ಷೇಪಣೆ ವ್ಯಕ್ತಪಡಿಸಿದ ಖರ್ಗೆ, ರಾಜ್ಯಪಾಲರ ಪಾತ್ರ ಮತ್ತು ವಿರೋಧ ಪಕ್ಷಗಳ ಸರ್ಕಾರಗಳು ಇರುವ ರಾಜ್ಯಗಳಲ್ಲಿ ರಾಜ್ಯಪಾಲರು ನಡೆದುಕೊಳ್ಳುತ್ತಿರುವ ರೀತಿಯ ಬಗ್ಗೆ ಸಂಸತ್ತಿನಲ್ಲಿ ಚರ್ಚಿಸಲು ಅವಕಾಶ ಕೋರಲಾಗಿದೆ ಎಂದರು.</p>.<p>ಅಮೆರಿಕದ ಹಿಂಡೆನ್ಬರ್ಗ್ ಸಂಸ್ಥೆಯು ಹೊರಗೆಡವಿದ ಸಂಶೋಧನಾ ವರದಿಯಿಂದ ಷೇರುಪೇಟೆಯಲ್ಲಿ ನೆಲಕಚ್ಚಿರುವ ಅದಾನಿ ಸಮೂಹದ ಆರ್ಥಿಕ ಅಕ್ರಮಗಳ ಬಗ್ಗೆಯೂ ಅಧಿವೇಶನದಲ್ಲಿ ಪ್ರಶ್ನಿಸಲಾಗುವುದು ಎಂದರು.</p>.<p>ಸುಮಾರು 30 ಕೋಟಿ ಜನರು ತಮ್ಮ ಭವಿಷ್ಯದ ಭದ್ರತೆಗೆ ಎಲ್ಐಸಿ ವಿಮೆಯಲ್ಲಿ ಹೂಡಿಕೆ ಮಾಡಿದ್ದಾರೆ. ಆದರೆ, ಈಗ ಅವರು ತಮ್ಮ ಉಳಿತಾಯ ಹಣ ಕಳೆದುಕೊಳ್ಳುವ ಅಪಾಯದಲ್ಲಿದ್ದಾರೆ. ಈ ಬಗ್ಗೆಯೂ ಧ್ವನಿ ಎತ್ತಲು ವಿಪಕ್ಷಗಳು ಜಂಟಿ ಕಾರ್ಯತಂತ್ರ ರೂಪಿಸಿವೆ ಎಂದು ಖರ್ಗೆ ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>