‘ಸನಾತನ ಧರ್ಮವನ್ನು ಅನುಸರಿಸುವವರಿಗೆ ಮಾತ್ರ ವಿಷ್ಣುಪಾದ ದೇವಸ್ಥಾನಕ್ಕೆ ಭೇಟಿ ನೀಡಲು ಅವಕಾಶವಿದೆ ಎಂದು ನನ್ನ ಕಕ್ಷಿದಾರರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ. ಸಚಿವರು ಮುಸ್ಲಿಂ ಆಗಿರುವುದರಿಂದ ಅಲ್ಲಿಗೆ ಭೇಟಿ ನೀಡಬಾರದು ಎಂಬುದಾಗಿ ಹೇಳಿದ್ದಾರೆ. ಸೆಪ್ಟೆಂಬರ್ 2 ರಂದು ನ್ಯಾಯಾಲಯವು ಈ ಪ್ರಕರಣದ ವಿಚಾರಣೆ ನಡೆಸಲಿದೆ’ ಎಂದು ಚಂದ್ರ ಕಿಶೋರ್ ಪರ ವಕೀಲ ರವೀಂದ್ರ ಕುಮಾರ್ ಸಿಂಗ್ ಹೇಳಿದ್ದಾರೆ.