ಹಬ್ಬಗಳ ಸಂದರ್ಭದಲ್ಲಿ ಪಟಾಕಿಗಳನ್ನು ಸಿಡಿಸಲಾಗುತ್ತದೆ. ಇದು ಭಾರಿ ಸಂಖ್ಯೆಯಲ್ಲಿ ಜನರು ಗುಂಪು ಸೇರಲು ಕಾರಣವಾಗುವುದಲ್ಲದೇ, ವ್ಯಕ್ತಿಗತ ಅಂತರ ಕಾಯ್ದುಕೊಳ್ಳದಿರುವುದು ಸೇರಿದಂತೆ ಮಾರ್ಗಸೂಚಿಗಳ ಉಲ್ಲಂಘನೆಗೆ ಕಾರಣವಾಗಲಿದೆ. ಇದರಿಂದ ಕೋವಿಡ್–19ನ ಮತ್ತೊಂದು ಅಲೆ ಕಾಣಿಸಿಕೊಳ್ಳಬಹುದು ಎಂದು ಹಲವಾರು ತಜ್ಞರು ಎಚ್ಚರಿಕೆ ನೀಡಿದ್ದರು.