ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಯೋಧ್ಯೆ ಭೂಮಿ ಖರೀದಿ ಹಗರಣ: ಪ್ರಧಾನಿ, ಸುಪ್ರೀಂ ಮೌನ ಪ್ರಶ್ನಿಸಿದ ಕಾಂಗ್ರೆಸ್

Last Updated 20 ಜೂನ್ 2021, 12:55 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಟ್ರಸ್ಟ್‌ನಿಂದ ಭೂಮಿ ಖರೀದಿಸುವಲ್ಲಿ ಅವ್ಯವಹಾರವಾಗಿದೆ ಎಂದು ಕಾಂಗ್ರೆಸ್‌ ಮತ್ತೆ ಆರೋಪಿಸಿದೆ. ಕೋರ್ಟ್ ಉಸ್ತುವಾರಿಯಲ್ಲಿ ತನಿಖೆಗೆ ಆದೇಶಿಸುವ ಮೂಲಕ ಸತ್ಯ ಬಯಲಿಗೆಳೆಯಬೇಕಾದ ಹೊಣೆಗಾರಿಕೆ ಪ್ರಧಾನಿ ಮತ್ತು ಸುಪ್ರೀಂ ಕೋರ್ಟ್ ಮೇಲಿದೆ ಎಂದೂ ತಿಳಿಸಿದೆ.

ಕಾಂಗ್ರೆಸ್‌ನ ಮುಖ್ಯ ವಕ್ತಾರ ರಣದೀಪ್‌ ಸುರ್ಜೆವಾಲಾ ಅವರು, ಶ್ರೀರಾಮನ ಹೆಸರಿನಲ್ಲಿ ಸಂಗ್ರಹಿಸಿದ್ದ ಹಣವನ್ನು ಲೂಟಿ ಮಾಡುವ ಕಾರ್ಯವನ್ನು ಅಯೋಧ್ಯೆಯ ಬಿಜೆಪಿ ನಾಯಕರು ಮುಂದುವರಿಸಿದ್ದಾರೆ. ಈ ವಿಷಯದಲ್ಲಿ ಪ್ರಧಾನಿ ಮತ್ತು ಸುಪ್ರೀಂ ಕೋರ್ಟ್ ‘ಮೌನ’ವಹಿಸಿರುವುದು ಏಕೆ ಎಂದು ಪ್ರಶ್ನಿಸಿದರು.

ಬಿಜೆಪಿ ನಾಯಕರೊಬ್ಬರು 890 ಮೀಟರ್ ಭೂಮಿಯನ್ನು ಇದೇ ವರ್ಷದ ಫೆಬ್ರುವರಿಯಲ್ಲಿ ₹20 ಲಕ್ಷಕ್ಕೆ ಖರೀದಿಸಿದ್ದರು. ಇದನ್ನೇ ಟ್ರಸ್ಟ್‌ಗೆ ₹ 2.5 ಕೋಟಿಗೆ ಮಾರಿದ್ದು, 79 ದಿನದಲ್ಲಿ ಶೇ 1250ರಷ್ಟು ಲಾಭ ಮಾಡಿದ್ದಾರೆ ಎಂದು ಆಪಾದಿಸಿದರು.

ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರವನ್ನು ಸುಪ್ರೀಂ ಕೋರ್ಟ್‌ ಆದೇಶದಂತೆ ನಿರ್ಮಿಸಲಾಗುತ್ತಿದೆ. ಈ ವಿಷಯದಲ್ಲಿ ಸತ್ಯ ಬಹಿರಂಗ ಪಡಿಸಲು ತನಿಖೆಗೆ ಆದೇಶಿಸುವುದು ಟ್ರಸ್ಟ್ ನಿರ್ಮಾಣ ಮಾಡಿರುವ ಪ್ರಧಾನಮಂತ್ರಿ ಹಾಗೂ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿಗಳ ಹೊಣೆಗಾರಿಕೆಯಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT