ನವದೆಹಲಿ: ಕಾಂಗ್ರೆಸ್ ಪಕ್ಷವು ಸಂವಹನ, ಪ್ರಚಾರ ಮತ್ತು ಮಾಧ್ಯಮ ವಿಭಾಗದ ಉಸ್ತುವಾರಿಯಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್ ಅವರನ್ನು ನೇಮಿಸಿದೆ. ರಣದೀಪ್ ಸುರ್ಜೇವಾಲಾ ಬದಲಿಗೆ ಇವರು ನೇಮಕಗೊಂಡಿದ್ದಾರೆ.
ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಸಭೆ ಸದಸ್ಯ ಜೈರಾಂ ರಮೇಶ್ ಅವರಿಗೆ ಹೊಸ ಜವಾಬ್ದಾರಿಯನ್ನು ವಹಿಸಲಾಗಿದೆ. ಸುರ್ಜೇವಾಲಾ ಅವರು ಪಕ್ಷದ ಕರ್ನಾಟಕದ ಉಸ್ತುವಾರಿಯಾಗಿ ಮುಂದುವರಿಯುವರು ಎಂದು ಪಕ್ಷವು ಹೇಳಿಕೆಯಲ್ಲಿ ತಿಳಿಸಿದೆ.