‘ಹೊಸದಾಗಿ ಕೃಷಿ ಕಾಯ್ದೆ ಜಾರಿಗೊಳಿಸುವುದು ಅಗತ್ಯವಿರಲಿಲ್ಲ. ಸರ್ಕಾರ ಅವಸರದಲ್ಲಿ ಈ ಕಾಯ್ದೆಗಳನ್ನು ರೂಪಿಸಿದೆ. ಕೋವಿಡ್–19 ಸಾಂಕ್ರಾಮಿಕ ಕಾಯಿಲೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಜೂನ್ ತಿಂಗಳಲ್ಲಿ ಈ ಬಗ್ಗೆ ಸುಗ್ರೀವಾಜ್ಞೆ ಜಾರಿಗೊಳಿಸಿತು. ಅಂತಹ ಅಗತ್ಯ ಸರ್ಕಾರಕ್ಕೆ ಏನಿತ್ತು. ಕೆಲವು ಉದ್ಯಮ ಸ್ನೇಹಿತರಿಗೆ ನೆರವು ನೀಡುವ ಉದ್ದೇಶದಿಂದಲೇ ಈ ಕ್ರಮಕೈಗೊಳ್ಳಲಾಯಿತು. ಬಳಿಕ, ಸಂಸದೀಯ ಪ್ರಕ್ರಿಯೆಗಳನ್ನು ಪಾಲಿಸದೆಯೇ ಸಂಸತ್ನಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ ಪಡೆದು ಕಾಯ್ದೆ ರೂಪಿಸಲಾಗಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ ಕಾಯ್ದೆಯಾಗಿದೆ’ ಎಂದು ಕಟುವಾಗಿ ಟೀಕಿಸಿದರು.