<p>ನವದೆಹಲಿ: ವಿವಿಧ ರೈತ ಸಂಘಟನೆಗಳು ಡಿಸೆಂಬರ್ 8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.</p>.<p>ರೈತರಿಗೆ ಬೆಂಬಲ ಸೂಚಿಸಿ ಅಂದು ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ರಾಜಧಾನಿಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅದು ತಿಳಿಸಿದೆ.</p>.<p>‘ಇಡೀ ಜಗತ್ತು ರೈತರ ಪರಿಸ್ಥಿತಿಯನ್ನು ನೋಡುತ್ತಿದೆ. ದೇಶದ ರಾಜಧಾನಿ ಗಡಿಯಲ್ಲಿ ಚಳಿಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಹೊಸದಾಗಿ ಕೃಷಿ ಕಾಯ್ದೆ ಜಾರಿಗೊಳಿಸುವುದು ಅಗತ್ಯವಿರಲಿಲ್ಲ. ಸರ್ಕಾರ ಅವಸರದಲ್ಲಿ ಈ ಕಾಯ್ದೆಗಳನ್ನು ರೂಪಿಸಿದೆ. ಕೋವಿಡ್–19 ಸಾಂಕ್ರಾಮಿಕ ಕಾಯಿಲೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಜೂನ್ ತಿಂಗಳಲ್ಲಿ ಈ ಬಗ್ಗೆ ಸುಗ್ರೀವಾಜ್ಞೆ ಜಾರಿಗೊಳಿಸಿತು. ಅಂತಹ ಅಗತ್ಯ ಸರ್ಕಾರಕ್ಕೆ ಏನಿತ್ತು. ಕೆಲವು ಉದ್ಯಮ ಸ್ನೇಹಿತರಿಗೆ ನೆರವು ನೀಡುವ ಉದ್ದೇಶದಿಂದಲೇ ಈ ಕ್ರಮಕೈಗೊಳ್ಳಲಾಯಿತು. ಬಳಿಕ, ಸಂಸದೀಯ ಪ್ರಕ್ರಿಯೆಗಳನ್ನು ಪಾಲಿಸದೆಯೇ ಸಂಸತ್ನಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ ಪಡೆದು ಕಾಯ್ದೆ ರೂಪಿಸಲಾಗಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ ಕಾಯ್ದೆಯಾಗಿದೆ’ ಎಂದು ಕಟುವಾಗಿ ಟೀಕಿಸಿದರು.</p>.<p>‘ಕಾಯ್ದೆಗಳನ್ನು ರೂಪಿಸುವಾಗ ರೈತ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ ಸಲಹೆಗಳನ್ನು ಪಡೆಯಲಾಗುತ್ತಿತ್ತು. ಸರ್ಕಾರ ಮತ್ತು ಕಾರ್ಪೋರೇಟ್ ಸ್ನೇಹಿತರ ನಡುವಿನ ಅಪವಿತ್ರ ಮೈತ್ರಿಯಿಂದ ಈ ಕಾಯ್ದೆಗಳನ್ನು ರೂಪಿಸಲಾಗಿದೆ. ಇದರಿಂದಾಗಿ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ವಿವಿಧ ರೈತ ಸಂಘಟನೆಗಳು ಡಿಸೆಂಬರ್ 8ರಂದು ಕರೆ ನೀಡಿರುವ ‘ಭಾರತ್ ಬಂದ್’ಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.</p>.<p>ರೈತರಿಗೆ ಬೆಂಬಲ ಸೂಚಿಸಿ ಅಂದು ಎಲ್ಲ ಜಿಲ್ಲಾ ಕೇಂದ್ರಗಳು ಮತ್ತು ರಾಜಧಾನಿಗಳಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಅದು ತಿಳಿಸಿದೆ.</p>.<p>‘ಇಡೀ ಜಗತ್ತು ರೈತರ ಪರಿಸ್ಥಿತಿಯನ್ನು ನೋಡುತ್ತಿದೆ. ದೇಶದ ರಾಜಧಾನಿ ಗಡಿಯಲ್ಲಿ ಚಳಿಯನ್ನು ಲೆಕ್ಕಿಸದೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೂ, ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ’ ಎಂದು ಕಾಂಗ್ರೆಸ್ ವಕ್ತಾರ ಪವನ್ ಖೇರಾ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಹೊಸದಾಗಿ ಕೃಷಿ ಕಾಯ್ದೆ ಜಾರಿಗೊಳಿಸುವುದು ಅಗತ್ಯವಿರಲಿಲ್ಲ. ಸರ್ಕಾರ ಅವಸರದಲ್ಲಿ ಈ ಕಾಯ್ದೆಗಳನ್ನು ರೂಪಿಸಿದೆ. ಕೋವಿಡ್–19 ಸಾಂಕ್ರಾಮಿಕ ಕಾಯಿಲೆಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಸಂದರ್ಭದಲ್ಲಿ ಜೂನ್ ತಿಂಗಳಲ್ಲಿ ಈ ಬಗ್ಗೆ ಸುಗ್ರೀವಾಜ್ಞೆ ಜಾರಿಗೊಳಿಸಿತು. ಅಂತಹ ಅಗತ್ಯ ಸರ್ಕಾರಕ್ಕೆ ಏನಿತ್ತು. ಕೆಲವು ಉದ್ಯಮ ಸ್ನೇಹಿತರಿಗೆ ನೆರವು ನೀಡುವ ಉದ್ದೇಶದಿಂದಲೇ ಈ ಕ್ರಮಕೈಗೊಳ್ಳಲಾಯಿತು. ಬಳಿಕ, ಸಂಸದೀಯ ಪ್ರಕ್ರಿಯೆಗಳನ್ನು ಪಾಲಿಸದೆಯೇ ಸಂಸತ್ನಲ್ಲಿ ಕೃಷಿ ಮಸೂದೆಗಳಿಗೆ ಅನುಮೋದನೆ ಪಡೆದು ಕಾಯ್ದೆ ರೂಪಿಸಲಾಗಿದೆ. ಇದು ಸಂಪೂರ್ಣ ಪ್ರಜಾಪ್ರಭುತ್ವ ವಿರೋಧಿ ಕಾಯ್ದೆಯಾಗಿದೆ’ ಎಂದು ಕಟುವಾಗಿ ಟೀಕಿಸಿದರು.</p>.<p>‘ಕಾಯ್ದೆಗಳನ್ನು ರೂಪಿಸುವಾಗ ರೈತ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದಿದ್ದರೆ ಸಲಹೆಗಳನ್ನು ಪಡೆಯಲಾಗುತ್ತಿತ್ತು. ಸರ್ಕಾರ ಮತ್ತು ಕಾರ್ಪೋರೇಟ್ ಸ್ನೇಹಿತರ ನಡುವಿನ ಅಪವಿತ್ರ ಮೈತ್ರಿಯಿಂದ ಈ ಕಾಯ್ದೆಗಳನ್ನು ರೂಪಿಸಲಾಗಿದೆ. ಇದರಿಂದಾಗಿ, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>