ನವದೆಹಲಿ: ಸಮಾಜವಾದಿ ಪಕ್ಷ (ಎಸ್ಪಿ) ಮತ್ತು ಬಹುಜನ ಸಮಾಜವಾದಿ ಪಕ್ಷಗಳೊಂದಿಗೆ (ಬಿಎಸ್ಪಿ) ಮೈತ್ರಿ ಇಲ್ಲದೇ, ಕಾಂಗ್ರೆಸ್ ಪಕ್ಷಕ್ಕೆ ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯನ್ನು ಗೆಲ್ಲುವ ಸಾಮರ್ಥ್ಯವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್ ಮುಖಂಡ ಅಜಯ್ ಕುಮಾರ್ ಲಲ್ಲು, ‘ನಾವು ಸ್ವಂತ ಬಲದ ಮೇಲೆ ಸರ್ಕಾರ ರಚಿಸುತ್ತೇವೆ‘ ಎಂದು ಹೇಳಿದ್ದಾರೆ.