<p><strong>ಚೆನ್ನೈ:</strong> ಕೇರಳದ ಕಾಂಗ್ರೆಸ್ ನಾಯಕ ಮತ್ತು ಪಟ್ಟಂಬಿ ಪುರಸಭೆಯ ಮಾಜಿ ಅಧ್ಯಕ್ಷ ಕೆ.ಎಸ್.ಬಿ. ಥಂಗಳ್ ಅವರನ್ನು ಮಂಗಳವಾರ ಬೆಳಗ್ಗೆ ಕೊಯಮತ್ತೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿಗಳು ಬಂಧಿಸಿದ್ದು, ಅವರ ಲಗೇಜ್ನಿಂದ ರಿವಾಲ್ವರ್ ಮತ್ತು ಏಳು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಮುಂದಿನ ತನಿಖೆಗಾಗಿ ಅವರನ್ನು ಪೀಲಮೇದು ಪೊಲೀಸರಿಗೆ ಒಪ್ಪಿಸಲಾಗಿದೆ.</p>.<p>ಕಾಂಗ್ರೆಸ್ ನಾಯಕ ಕೊಯಮತ್ತೂರಿನಿಂದ ಬೆಂಗಳೂರಿಗೆ ತೆರಳುವ ಇಂಡಿಗೊ ವಿಮಾನವನ್ನು ಹತ್ತಿ ಅಲ್ಲಿಂದ ಪಂಜಾಬ್ನ ಅಮೃತಸರಕ್ಕೆ ತೆರಳಬೇಕಿತ್ತು.</p>.<p>ತನ್ನ ಬ್ಯಾಗಿನಲ್ಲಿ ರಿವಾಲ್ವರ್ ಇದ್ದದ್ದು ನನ್ನ ಗಮನಕ್ಕೆ ಬಂದಿಲ್ಲ ಎಂದು ಥಂಗಲ್ ಅವರು ಸಿಐಎಸ್ಎಫ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.</p>.<p>'ವಿಮಾನದಲ್ಲಿ ಪ್ರಯಾಣಿಸುವ ವೇಳೆ ರಿವಾಲ್ವರ್ ಕೊಂಡೊಯ್ಯಲು ಯಾವುದೇ ದಾಖಲೆಗಳು ಅವರ ಬಳಿ ಇರಲಿಲ್ಲ' ಎಂದು ಸಿಐಎಸ್ಎಫ್ ಅಧಿಕಾರಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಕಳೆದ 15 ವರ್ಷಗಳಿಂದ ಮುಸ್ಲಿಂ ಎಜುಕೇಷನಲ್ ಸೊಸೈಟಿಯ (ಎಂಇಎಸ್) ಕಾರ್ಯದರ್ಶಿಯಾಗಿದ್ದು, ಮಕ್ಕಳಿಗೆ ಸಮವಸ್ತ್ರವನ್ನು ಖರೀದಿಸಲು ಅಮೃತಸರಕ್ಕೆ ಹೋಗುತ್ತಿದ್ದುದಾಗಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ' ಎನ್ನಲಾಗಿದೆ.</p>.<p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿದ್ದ ವೇಳೆ 2007ರ ಫೆಬ್ರುವರಿಯಲ್ಲಿ ಅವರ ಬ್ಯಾಗಿನಲ್ಲಿ ಐದು ಜೀವಂತ ಗುಂಡುಗಳು ಪತ್ತೆಯಾಗಿತ್ತು. ಈ ವೇಳೆ ಸಿಐಎಎಫ್ ಅಧಿಕಾರಿಗಳು ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಕೇರಳದ ಕಾಂಗ್ರೆಸ್ ನಾಯಕ ಮತ್ತು ಪಟ್ಟಂಬಿ ಪುರಸಭೆಯ ಮಾಜಿ ಅಧ್ಯಕ್ಷ ಕೆ.ಎಸ್.ಬಿ. ಥಂಗಳ್ ಅವರನ್ನು ಮಂಗಳವಾರ ಬೆಳಗ್ಗೆ ಕೊಯಮತ್ತೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಐಎಸ್ಎಫ್ ಅಧಿಕಾರಿಗಳು ಬಂಧಿಸಿದ್ದು, ಅವರ ಲಗೇಜ್ನಿಂದ ರಿವಾಲ್ವರ್ ಮತ್ತು ಏಳು ಜೀವಂತ ಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ಮುಂದಿನ ತನಿಖೆಗಾಗಿ ಅವರನ್ನು ಪೀಲಮೇದು ಪೊಲೀಸರಿಗೆ ಒಪ್ಪಿಸಲಾಗಿದೆ.</p>.<p>ಕಾಂಗ್ರೆಸ್ ನಾಯಕ ಕೊಯಮತ್ತೂರಿನಿಂದ ಬೆಂಗಳೂರಿಗೆ ತೆರಳುವ ಇಂಡಿಗೊ ವಿಮಾನವನ್ನು ಹತ್ತಿ ಅಲ್ಲಿಂದ ಪಂಜಾಬ್ನ ಅಮೃತಸರಕ್ಕೆ ತೆರಳಬೇಕಿತ್ತು.</p>.<p>ತನ್ನ ಬ್ಯಾಗಿನಲ್ಲಿ ರಿವಾಲ್ವರ್ ಇದ್ದದ್ದು ನನ್ನ ಗಮನಕ್ಕೆ ಬಂದಿಲ್ಲ ಎಂದು ಥಂಗಲ್ ಅವರು ಸಿಐಎಸ್ಎಫ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.</p>.<p>'ವಿಮಾನದಲ್ಲಿ ಪ್ರಯಾಣಿಸುವ ವೇಳೆ ರಿವಾಲ್ವರ್ ಕೊಂಡೊಯ್ಯಲು ಯಾವುದೇ ದಾಖಲೆಗಳು ಅವರ ಬಳಿ ಇರಲಿಲ್ಲ' ಎಂದು ಸಿಐಎಸ್ಎಫ್ ಅಧಿಕಾರಿಗಳು ಸುದ್ದಿಗಾರರಿಗೆ ತಿಳಿಸಿದ್ದಾರೆ.</p>.<p>ಕಳೆದ 15 ವರ್ಷಗಳಿಂದ ಮುಸ್ಲಿಂ ಎಜುಕೇಷನಲ್ ಸೊಸೈಟಿಯ (ಎಂಇಎಸ್) ಕಾರ್ಯದರ್ಶಿಯಾಗಿದ್ದು, ಮಕ್ಕಳಿಗೆ ಸಮವಸ್ತ್ರವನ್ನು ಖರೀದಿಸಲು ಅಮೃತಸರಕ್ಕೆ ಹೋಗುತ್ತಿದ್ದುದಾಗಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ' ಎನ್ನಲಾಗಿದೆ.</p>.<p>ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇರಳ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿಯಾಗಿದ್ದ ವೇಳೆ 2007ರ ಫೆಬ್ರುವರಿಯಲ್ಲಿ ಅವರ ಬ್ಯಾಗಿನಲ್ಲಿ ಐದು ಜೀವಂತ ಗುಂಡುಗಳು ಪತ್ತೆಯಾಗಿತ್ತು. ಈ ವೇಳೆ ಸಿಐಎಎಫ್ ಅಧಿಕಾರಿಗಳು ಚೆನ್ನೈ ವಿಮಾನ ನಿಲ್ದಾಣದಲ್ಲಿ ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>